Homeಮುಖಪುಟನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

- Advertisement -
- Advertisement -

ಮಲಯಾಳಂ ನಟಿ ಪಾರ್ವತಿ ತಿರುವೋತ್ ಅವರನ್ನು ಪದೇ ಪದೇ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಎರ್ನಾಕುಲಂನಲ್ಲಿ 35 ವರ್ಷದ ವ್ಯಕ್ತಿಯನ್ನು ಮರಡು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಡಿ (ಹಿಂಬಾಲಿಸುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮರಡು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಅಪರಿಚಿತ ಆರೋಪಿಯು ಎರ್ನಾಕುಲಂ ಮತ್ತು ಕೋಯಿಕ್ಕೋಡ್‌ನಲ್ಲಿರುವ ನಟಿಯ ನಿವಾಸಗಳಿಗೆ ಪದೇ ಪದೇ ಭೇಟಿ ನೀಡಿದ್ದನು. ಇದರಿಂದಾಗಿ ನಟಿಯು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಆರೋಪಿಸಿವೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕೋಝಿಕ್ಕೋಡ್‌ನಲ್ಲಿರುವ ಪಾರ್ವತಿ ಅವರ ಕುಟುಂಬದ ಮನೆಗೆ ಪ್ರವೇಶಿಸಲು ಆರೋಪಿಯು ಹಲವಾರು ಪ್ರಯತ್ನಗಳನ್ನು ಮಾಡಿದ್ದಾನೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ್ರತಿ ಬಾರಿ ಆಹಾರದ ಪೊಟ್ಟಣಗಳೊಂದಿಗೆ ಆಗಮಿಸಿಸುವ ಆರೋಪಿಯು, ಅವರನ್ನು ಮನೆ ಪ್ರವೇಶಿಸಲು ಬಿಡದ ಭದ್ರತಾ ಅಧಿಕಾರಿಯೊಂದಿಗೆ ಜಗಳವಾಡುತ್ತಿದ್ದನು ಎಂದು ವರದಿಯಾಗಿದೆ.

ಪಾರ್ವತಿ ಈ ಹಿಂದೆ ಕೂಡಾ ವಕೀಲರೆಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಹಿಂಬಾಲಿಸಲ್ಪಟ್ಟಿದ್ದರು. ಇದರ ನಂತರ ಪಾಲಕ್ಕಾಡ್‌ನ ನೆನ್ಮಾರಾ ಮೂಲದ 48 ವರ್ಷದ ಕಿಶೋರ್ ಬಾಲನ್ ಅವರನ್ನು ಡಿಸೆಂಬರ್ 2019 ರಲ್ಲಿ ಪೊಲೀಸರು ಬಂಧಿಸಿದ್ದರು. ಅಂದು ಬಂಧನಕ್ಕೆ ಒಳಗಾಗಿದ್ದ ಕಿಶೋರ್, ಈ ಹಿಂದೆ ವಂಚನೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದ ಎಂದು ಪೊಲೀಸರು ತಿಳಿಸಿದ್ದರು.

ನಟಿ ಪಾರ್ವತಿ ಅವರು ಈ ಹಿಂದೆಯೆ, “ಹಿಂಬಾಲಿಸುವುದು ಗಂಭೀರ ಅಪರಾಧ, ಇದು ಅನೇಕ ಮಹಿಳೆಯರ ಮೇಲೆ ಪರಿಣಾಮ ಬೀರಿದೆ. ಆದರೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಪಾರ್ವತಿ ತಿರುವೋತು ಅಭಿನಯದ JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...