Homeಮುಖಪುಟಮಾಸ್ಕ್ ಧರಿಸದ ಕಾರಣಕ್ಕೆ ಬಂಧನಕ್ಕೊಳಗಾದ ದಲಿತ ಯುವಕ ಪೊಲೀಸ್ ಕಸ್ಟಡಿಯಲ್ಲಿ ಸಾವು!

ಮಾಸ್ಕ್ ಧರಿಸದ ಕಾರಣಕ್ಕೆ ಬಂಧನಕ್ಕೊಳಗಾದ ದಲಿತ ಯುವಕ ಪೊಲೀಸ್ ಕಸ್ಟಡಿಯಲ್ಲಿ ಸಾವು!

ಮೃತ ಯರಿಚಾರ್ಲಾ ಕಿರಣ್ ತಲೆಗೆ ಪೆಟ್ಟು ಬಿದ್ದು ಗುಂಟೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

- Advertisement -
- Advertisement -

ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ ಫೇಸ್ ಮಾಸ್ಕ್ ಧರಿಸಿಲ್ಲ ಎಂಬ ಆರೋಪದ ಮೇಲೆ ಪೊಲೀಸರ ವಶವಾಗಿದ್ದ ದಲಿತ ಯುವಕ ಮಂಗಳವಾರ ತಡರಾತ್ರಿ ಪ್ರಕಾಶಂ ಜಿಲ್ಲೆಯ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ.

ಮೃತ ಯರಿಚಾರ್ಲಾ ಕಿರಣ್ ತಲೆಗೆ ಪೆಟ್ಟು ಬಿದ್ದು ಗುಂಟೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜುಲೈ 18 ರಂದು ಪ್ರಕಾಶಂ ಜಿಲ್ಲೆಯ ಚಿರಾಲಾ ಪಟ್ಟಣದ ಕೊರೊನಾ ಹಾಟ್‌ಸ್ಪಾಟ್‌ನಲ್ಲಿ ಕಿರಣ್‌ ಅವರನ್ನು ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿಲ್ಲ ಎಂದು ಆರೋಪಿಸಿ ಪೊಲೀಸರು ವಶಕ್ಕೆ ಪಡೆದಿದ್ದರು.

“ಕಿರಣ್ ಮತ್ತು ಆತನ ಸ್ನೇಹಿತ ಶಿನಿ ಅಬ್ರಹಾಂ ಮಾಸ್ಕ್ ಗಳಿಲ್ಲದೆ ಮೋಟಾರ್ ಸೈಕಲ್‌ನಲ್ಲಿ ಚಲಿಸುತ್ತಿದ್ದು, ಕೊಥಾಪೇಟ ಚೆಕ್ ಪೋಸ್ಟ್‌ನಲ್ಲಿರುವ ಕಾನ್‌ಸ್ಟೆಬಲ್ ರಾಮಿ ರೆಡ್ಡಿ ಅವರಿಬ್ಬರನ್ನು ಖಂಡಿಸಿದರು. ಅದಕ್ಕಾಗಿ ಕಾನ್‌ಸ್ಟೆಬಲ್‌ನನ್ನು ಥಳಿಸಿದ್ದಾರೆ” ಎಂದು ಪೊಲೀಸರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ವಿಜಯ್ ಕುಮಾರ್ ಅವರಿಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಿರಣ್ ನನ್ನು ಟೌನ್ ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಚಲಿಸುತ್ತಿದ್ದ ಪೊಲೀಸ್ ವಾಹನದಿಂದ ಹೊರಗೆ ಹಾರಿದ್ದರಿಂದ ಅವರ ತಲೆಗೆ ಪೆಟ್ಟಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಆತನ ತಲೆಗೆ ಹೊಡೆದಿದ್ದು ಮಾರಣಾಂತಿಕ ಗಾಯವಾಗಿದೆ ಎಂದು ಮೃತರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕಿರಣ್ ಅವರನ್ನು ಮೊದಲು ಚಿರಲಾ ಸರ್ಕಾರಿ ಆಸ್ಪತ್ರೆಗೆ ಮತ್ತು ನಂತರ ಉತ್ತಮ ಚಿಕಿತ್ಸೆಗಾಗಿ ಗುಂಟೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಲಿತರ ವಿರುದ್ಧ ಪದೇ ಪದೇ ಪೊಲೀಸ್ ಹಿಂಸಾಚಾರ ನಡೆಸುತ್ತಿರುವುದು ರಾಜ್ಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಸರ್ಕಾರವನ್ನು ದೂಷಿಸಿ, “ಜಗನ್ ಆಡಳಿತದಲ್ಲಿ ಬದುಕಲು ದಲಿತರಿಗೆ ಹಕ್ಕಿಲ್ಲವೇ? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ವರಪ್ರಸಾದ್ ಮತ್ತು ಕಿರಣ್ ಪ್ರಕರಣಗಳನ್ನು ಉದಾಹರಿಸಿದ ಅವರು, “ಆಡಳಿತ ಪಕ್ಷದ ನಾಯಕರ ಮೆಚ್ಚುಗೆ ಪಡೆಯಲು ಪೊಲೀಸರು ವರಪ್ರಸಾದ್ ಅವರನ್ನು ಹಿಂಸಿಸಿದ್ದರು. ಈಗ ಪ್ರಕಾಶಂ ಜಿಲ್ಲೆಯ ದಲಿತ ಯುವ ಕಿರಣ್ ಕುಮಾರ್ ಪೊಲೀಸ್ ಹಲ್ಲೆಯಿಂದ ಸಾವನ್ನಪ್ಪಿದ್ದಾನೆ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರು ಆಡಳಿತ ಪಕ್ಷದ ದರೋಡೆಕೋರರಾಗಿ ಮಾರ್ಪಟ್ಟಿದ್ದಾರೆ ಮತ್ತು ಗೂಂಡಾಗಳಂತೆ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ” ಎಂದರು.

ಕಿರಣ್ ಸಾವಿನ ನಂತರ ಚಿರಾಲಾದ ಥಾಮಸ್‌ಪೇಟಾ ಪ್ರದೇಶ ಬುಧವಾರ ಉದ್ವಿಗ್ನಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ.

ಕಿರಣ್ ತಂದೆ ಮೋಹನ್ ಎಸ್‌ಐ ವಿಜಯ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದು, ಐಪಿಸಿ ಸೆಕ್ಷನ್ 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಪ್ರಾರಂಭಿಸಲಾಗಿದೆ.

ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ರೂ. ಘೋಷಿಸಿದ್ದಾರೆ.

ವಿಚಾರಣೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ವಹಿಸಲಿದ್ದಾರೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕಾಶಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಕೌಶಲ್ ಈ ಪ್ರಕರಣವನ್ನು ದರ್ಸಿಯ ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಹಸ್ತಾಂತರಿಸಿದ್ದಾರೆ.


ಇದನ್ನೂ ಓದಿ: ದುಬೆ ಹತ್ಯೆ ಪ್ರಕರಣದ ತನಿಖಾ ತಂಡವನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...