Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...