Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...