Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...