Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....