Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...