Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...