Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...