Homeಕರ್ನಾಟಕಚಿಕ್ಕಬಳ್ಳಾಪುರದಲ್ಲಿ 15 ಮಂದಿಗೆ ಚಾಕುವಿನಿಂದ ಇರಿದ ವ್ಯಕ್ತಿಯ ಬಂಧನ: ಡ್ರಗ್ಸ್ ಸೇವನೆ ಶಂಕೆ

ಚಿಕ್ಕಬಳ್ಳಾಪುರದಲ್ಲಿ 15 ಮಂದಿಗೆ ಚಾಕುವಿನಿಂದ ಇರಿದ ವ್ಯಕ್ತಿಯ ಬಂಧನ: ಡ್ರಗ್ಸ್ ಸೇವನೆ ಶಂಕೆ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ರೌಡಿಶೀಟರ್ ಒಬ್ಬ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದು ಸುಮಾರು 15 ಮಂದಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಭಾನುವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಅರ್ಜುನ್ ಎಂಬ ವ್ಯಕ್ತಿ ಚಿಕ್ಕಬಳ್ಳಾಪುರದ ಬಿಬಿ ರಸ್ತೆ, ಕಾರ್ಖಾನೆ ಪೇಟೆ ಮತ್ತು ನಗರಸಭೆಯ ಸುತ್ತಾ ಸಿಕ್ಕ ಸಿಕ್ಕವರಿಗೆಲ್ಲ ಚಾಕುವಿನಿಂದ ಇರಿದು ಪರಾರಿಯಾಗಿದ್ದನು. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದವರಿಗೆ ಚಿಕ್ಕಬಳ್ಳಾಪುರದಲ್ಲಿಯೇ ಚಿಕತ್ಸೆ ನೀಡಲಾಗಿತ್ತು.

ಈ ಪ್ರಕರಣದಲ್ಲಿ ರೌಡಿ ಶೀಟರ್ ಆಗಿರುವ ಅರ್ಜುನ್ ಬಾಪೂಜಿನಗರದ ನಿವಾಸಿಯಾಗಿದ್ದು, ಗಾಂಜಾ ಸೇವಿಸಿದ್ದು, ತೀವ್ರ ಮತ್ತಿನಲ್ಲಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. ಆತನನ್ನು ಮಧ್ಯರಾತ್ರಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರ ದೇವಾಲಯದ ಬಳಿ ಬಂಧಿಸಲಾಗಿದೆ. ಆತನ ಬಳಿಯಿದ್ದ ಚಾಕು, ಲಾಂಗ್ ಮತ್ತು ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಸುಧಾಕರ್ ಮಾಹಿತಿ ನೀಡಿದ್ದು, “ಚಿಕ್ಕಬಳ್ಳಾಪುರ ನಗರದಲ್ಲಿ ನೆನ್ನೆ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು ತಡರಾತ್ರಿ 3ಗಂಟೆ ಹೊತ್ತಿಗೆ ಬಂಧಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

6 ಜನ ಗಾಯಾಳುಗಳು ಜೀವಾಪಾಯದಿಂದ ಪಾರಾಗಿದ್ದು ಅವರ ಚಿಕಿತ್ಸಾ ಜವಾಬ್ದಾರಿಯನ್ನು ನಾನು ಸಂಪೂರ್ಣವಾಗಿ ವಹಿಸಲು ನಿರ್ಧರಿಸಿದ್ದೇನೆ. ದುಷ್ಕರ್ಮಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಲು ರಾತ್ರಿಯಿಡೀ ಶ್ರಮಿಸಿದ ಎಸ್ಪಿ ನಾಗೇಶ್, ಡಿವೈಎಸ್ಪಿ ವಾಸುದೇವ್, ಸರ್ಕಲ್ ಇನ್ಸ್ಪೆಕ್ಟರ್ ರಾಜು ಮತ್ತು ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....