Homeಮುಖಪುಟಆಹಾರಕ್ಕೆ ಯಾವುದೇ ಧರ್ಮವಿಲ್ಲ: ಆಹಾರವೇ ಧರ್ಮ: ಜೋಮ್ಯಾಟೊ ಕೊಟ್ಟ ಖಡಕ್ ಪ್ರತಿಕ್ರಿಯೆಗೆ ನೆಟ್ಟಿಗರು ಫುಲ್ ಖುಷ್

ಆಹಾರಕ್ಕೆ ಯಾವುದೇ ಧರ್ಮವಿಲ್ಲ: ಆಹಾರವೇ ಧರ್ಮ: ಜೋಮ್ಯಾಟೊ ಕೊಟ್ಟ ಖಡಕ್ ಪ್ರತಿಕ್ರಿಯೆಗೆ ನೆಟ್ಟಿಗರು ಫುಲ್ ಖುಷ್

- Advertisement -
- Advertisement -

ಮಂಗಳವಾರ ರಾತ್ರಿ ಅಮಿತ್ ಶುಕ್ಲಾ ಎಂಬ ವ್ಯಕ್ತಿಯೊಬ್ಬರು ಆಹಾರ ವಿತರಣಾ ವೇದಿಕೆಯಾದ ಜೊಮಾಟೊದಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಆ ಆರ್ಡರ್ ತರುವ ರೈಡರ್ ಹಿಂದೂ ಅಲ್ಲ ಎಂಬ ಕಾರಣದಿಂದ ಕ್ಯಾನ್ಸಲ್ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಅವರ ದೂರಿಗೆ ಜೊಮಾಟೊ ನೀಡಿದ ಪ್ರತಿಕ್ರಿಯೆಗೆ ನೆಟ್ಟಿಗರಿಂದ ಭಾರೀ ಪ್ರಶಂಸೆ ಕೇಳಿಬಂದಿದೆ.

“ಅವರು ನನ್ನ ಆಹಾರ ಪೂರೈಸಲು ಮುಸ್ಲಿಂ ಸವಾರನನ್ನು ನಿಯೋಜಿಸಿದ್ದಾರೆ, ಅವರು ರೈಡರ್ ಅನ್ನು ಬದಲಾಯಿಸಲು ಸಾಧ್ಯವಿಲ್ಲ ಮತ್ತು ರದ್ದು ಮಾಡಿದರೆ ಹಣ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ದೂರಿರುವ ಮಧ್ಯಪ್ರದೇಶದ ಜಬಲ್‌ಪುರ ನಿವಾಸಿ ಅಮಿತ್ ಶುಕ್ಲಾ ಅವರು ತಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಮುಸ್ಲಿಂ ರೈಡರ್ ಕಾರಣಕ್ಕೆ ಆರ್ಡರ್ ರದ್ದುಗೊಳಿಸಿದ ಯುವಕನಿಗೆ ಜ್ಯೋಮ್ಯಾಟೊ ಕೊಟ್ಟ ಉತ್ತರ ಹೀಗಿದೆ. “ಆಹಾರಕ್ಕೆ ಯಾವುದೇ ಧರ್ಮವಿಲ್ಲ: ಆಹಾರವೇ ಧರ್ಮ” ಎಂದು ಜ್ಯೋಮ್ಯಾಟೊ ಟ್ವೀಟ್ ಮಾಡಿದೆ.

ಜೊತೆಗೆ ಜ್ಯೋಮ್ಯಾಟೊ ಸ್ಥಾಪಕ ದೀಪಿಂದರ್ ಗೋಯಲ್ ರವರು “ಭಾರತದ ವೈವಿಧ್ಯತೆ, ನಮ್ಮ ಗ್ರಾಹಕರು ಮತ್ತು ಪಾಲುದಾರರ ಅಮೂಲ್ಯ ಘನತೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಈ ನಮ್ಮ ಮೌಲ್ಯಗಳಿಗೆ ಅಡ್ಡಿಬರುವ/ತೊಡಕಾಗುವ ಯಾವುದೇ ವ್ಯವಹಾರವನ್ನು ಕಳೆದುಕೊಳ್ಳಲು ನಮಗೆ ಬೇಸರವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಂತಹ ದಿಟ್ಟತನದ ಪ್ರತಿಕ್ರಿಯೆಯ ಮೂಲಕ “ಧರ್ಮಾಂಧತೆ ಮತ್ತು ದ್ವೇಷವನ್ನು ತಿರಸ್ಕರಿಸಿದ್ದಕ್ಕಾಗಿ” ಜೊಮಾಟೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಬಹುದೊಡ್ಡ ಸ್ಟಾರ್ಟಪ್ ಸ್ಥಾಪಕರಿಂದ ಇಂತಹ ಹೇಳಿಕೆ ಅಗತ್ಯವಿತ್ತು. ಈಗಿನಿಂದ ನಾನು ಜ್ಯೋಮ್ಯಾಟೊ ಮಾತ್ರ ಬಳಸುತ್ತೇನೆ ಎಂದು ಅಬ್ದುಲ್ ರಶೀದ್ ಟ್ವೀಟ್ ಮಾಡಿದರೆ, ಈ ಪ್ರಕರಣವನ್ನು ಜ್ಯೋಮ್ಯಾಟೊ ಸಮರ್ಪಕವಾಗಿ ನಿರ್ವಹಿಸಿದೆ” ಎಂದು ರುಶಾಂಕ್ ಹೇಳಿದ್ದಾರೆ.

ನನ್ನ ಮುಂದಿನ 5 ಆರ್ಡರ್ ಗಳು ನಿಮ್ಮಂದಲೇ ಎಂದು ಖಾನ್ ಸಾಬ್ ಟ್ವೀಟ್ ಮಾಡಿದರೆ, “ಬೆಳೆಯುತ್ತಿರುವ ದ್ವೇಷ ಮತ್ತು ಧರ್ಮಾಂದತೆಯನ್ನು ಬಹಿರಂಗವಾಗಿ ತಿರಸ್ಕರಿಸುವ ಕಾರ್ಪೋರೇಟ್ ದನಿಗಳನ್ನು ಹುಡುಕುವುದು ಅಪರೂಪವಾಗಿತ್ತು. ಸರಿಯಾಗಿ ಹೇಳಿದ್ದೀರಿ” ಎಂದು ಸ್ಯಾಮ್ಸೆ ಯವರು ಹೇಳಿದ್ದಾರೆ.

ಕೃಪೆ: ಎನ್.ಡಿ.ಟಿ.ವಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...