Homeಮುಖಪುಟಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

ಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

- Advertisement -
- Advertisement -

ಸೂರತ್-ಕೋಲ್ಕತ್ತಾ ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ಗುರುವಾರ ಟೇಕ್ ಆಫ್ ಆಗುವ ಮುನ್ನ ವಿಮಾನದ ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಅಶೋಕ್ ಬಿಶ್ವಾಸ್ ಎಂದು ಗುರುತಿಸಲಾದ ಪ್ರಯಾಣಿಕ ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ಕೆಲಸೂರತ್-ಕೋಲ್ಕತ್ತಾ ವಿಮಾನಸದ ನಿಮಿತ್ತ ಗುಜರಾತ್‌ನ ನವಸಾರಿಯಲ್ಲಿ ವಾಸಿಸುತ್ತಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ತಪಾಸಣೆಯ ಹೊರತಾಗಿಯೂ, ಬಿಶ್ವಾಸ್ ಬೀಡಿ ಮತ್ತು ಬೆಂಕಿಕಡ್ಡಿಯನ್ನು ವಿಮಾನಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು. ತಾಂತ್ರಿಕ ಸಮಸ್ಯೆಗಳಿಂದಾಗಿ ವಿಳಂಬವಾದ ಕಾರಣ, ವಿಮಾನವು ಇನ್ನೂ ಟೇಕ್ ಆಫ್ ಆಗಿರಲಿಲ್ಲ. ಆದರೆ, ಗಗನ ಸಖಿಯೊಬ್ಬರು ಶೌಚಾಲಯದಿಂದ ಹೊಗೆಯ ವಾಸನೆ ಬರುತ್ತಿರುವುದನ್ನು ಗಮನಿಸಿ, ಅವರು ತಕ್ಷಣ ವಿಮಾನ ನಿಲ್ದಾಣದ ಹಿರಿಯ ಕಾರ್ಯನಿರ್ವಾಹಕರಿಗೆ ಮಾಹಿತಿ ನೀಡಿದರು.

ಸಿಬ್ಬಂದಿ ದೂರಿನ ಬಳಿಕ ಪರಿಶೀಲಿಸಿದಾಗ, ಬಿಶ್ವಾಸ್ ಅವರ ಬ್ಯಾಗ್‌ನಲ್ಲಿ ಬೀಡಿ ಮತ್ತು ಬೆಂಕಿಕಡ್ಡಿ ಪೆಟ್ಟಿಗೆ ಕಂಡುಬಂದಿದೆ. ನಂತರ, ಪ್ರಯಾಣಿಕನ್ನು ವಿಮಾನದಿಂದ ಕೆಳಗಿಳಿಸಲಾಯಿತು. ವಿಮಾನಯಾನ ಸಂಸ್ಥೆಯು ಘಟನೆಯನ್ನು ಡುಮಸ್ ಪೊಲೀಸರಿಗೆ ವರದಿ ಮಾಡಿತು, ಅವರು ಪ್ರಯಾಣಿಕನನ್ನು ಬಂಧಿಸಿದರು.

ಪೊಲೀಸ್ ಅಧಿಕಾರಿಗಳ ಪ್ರಕಾರ, ವಿಮಾನವು ಸಂಜೆ 4.35 ಕ್ಕೆ ಹೊರಡಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ವಿಳಂಬವಾಯಿತು. ಸಂಜೆ 5.30 ರ ಸುಮಾರಿಗೆ, ಗಗನಸಖಿ ಹೊಗೆಯ ವಾಸನೆಯನ್ನು ಗಮನಿಸಿ ತನ್ನ ಹಿರಿಯ ಅಧಿಕಾರಿಗೆ ಮಾಹಿತಿ ನೀಡಿದರು. ಹೆಚ್ಚಿನ ತಪಾಸಣೆ ನಡೆಸಿದಾಗ, 15ಎ ನಲ್ಲಿ ಕುಳಿತಿದ್ದ ಬಿಶ್ವಾಸ್ ನಿಷೇಧಿತ ವಸ್ತುಗಳನ್ನು ಹೊತ್ತೊಯ್ಯುತ್ತಿರುವುದು ಕಂಡುಬಂದಿದೆ.

ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪೊಲೀಸರು ಪ್ರಯಾಣಿಕನ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಮಾನಯಾನ ಸಂಸ್ಥೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಲಾಗಿಲ್ಲವಾದರೂ, ಅದರ ಹಿರಿಯ ಕಾರ್ಯನಿರ್ವಾಹಕರು ಅಧಿಕಾರಿಗಳಿಗೆ ಔಪಚಾರಿಕ ದೂರು ದಾಖಲಿಸಿದ್ದಾರೆ.

ಛತ್ತೀಸ್‌ಗಢ| ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...