Homeಕರ್ನಾಟಕವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು,...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

- Advertisement -
- Advertisement -

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ಆಗಿದೆ ಎಂದು ಆರೋಪಿಸಿ ವಿಡಿಯೋ ಪೋಸ್ಟ್ ಮಾಡಿದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಕೇರಳದ ಮಹಿಳೆ ವಿರುದ್ದ ಪೊಲೀಸರು ‘ಆತ್ಮಹತ್ಯೆಗೆ ಪ್ರಚೋದನೆ’ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ಹಂಚಿಕೊಂಡ ಶಿಮ್ಜಿತಾ ಮುಸ್ತಫಾ ಎಂಬ ಮಹಿಳೆ ವಿರುದ್ದ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಪೊಲೀಸ್‌ ಠಾಣೆಯಲ್ಲಿ ಸೋಮವಾರ (ಜ.19) ಎಫ್‌ಐಆರ್ ದಾಖಲಾಗಿದೆ. ಈಕೆ ವಿಡಿಯೋ ಹಂಚಿಕೊಂಡ ಬಳಿಕ ಮನನೊಂದು ಕೋಝಿಕ್ಕೋಡ್ ನಿವಾಸಿ 42 ವರ್ಷದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ದೂರುಗಳು ಮತ್ತು ಮೃತರಿಗೆ ತೀವ್ರ ಮಾನಸಿಕ ತೊಂದರೆ ಉಂಟುಮಾಡಿದ ಘಟನೆಗಳ ಅನುಕ್ರಮದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಪೊಲೀಸರು ಜನವರಿ 19ರಂದು ದೀಪಕ್ ಪೋಷಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ದೀಪಕ್ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅವರ ಕುಟುಂಬಸ್ಥರು ಕೋಝಿಕ್ಕೋಡ್ ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ದೂರಿನ ಪ್ರತಿಗಳನ್ನು ಜಿಲ್ಲಾಧಿಕಾರಿ, ಮಾನವ ಹಕ್ಕುಗಳ ಆಯೋಗ ಮತ್ತು ಡಿಜಿಪಿಗೆ ಕಳುಹಿಸಲಾಗುವುದು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಾನವ ಹಕ್ಕುಗಳ ಆಯೋಗವು ವಕೀಲರಾದ ವಿ ದೇವದಾಸ್ ಮತ್ತು ಅಬ್ದುಲ್ ರಹೀಮ್ ಪೂಕತ್ ಅವರು ಸಲ್ಲಿಸಿದ ದೂರುಗಳ ಮೇರೆಗೆ ಘಟನೆಯ ತನಿಖೆ ನಡೆಸುವಂತೆ ಉತ್ತರ ವಲಯ ಡಿಐಜಿಗೆ ನಿರ್ದೇಶನ ನೀಡಿದೆ. ನ್ಯಾಯಾಂಗ ಸದಸ್ಯ ಕೆ ಬೈಜುನಾಥ್ ಅವರು ಒಂದು ವಾರದೊಳಗೆ ವರದಿ ಕೋರಿದ್ದಾರೆ. ಫೆಬ್ರವರಿ 19ರಂದು ಕೋಝಿಕ್ಕೋಡ್‌ನ ಲೋಕೋಪಯೋಗಿ ಇಲಾಖೆಯ ವಿಶ್ರಾಂತಿ ಗೃಹದಲ್ಲಿ ನಡೆಯುವ ಆಯೋಗದ ಸಭೆಯಲ್ಲಿ ಈ ಪ್ರಕರಣವನ್ನು ಪರಿಗಣಿಸಲಾಗುವುದು ಎಂದಿದ್ದಾರೆ.

ಕುಟುಂಬದವರ ಪ್ರಕಾರ, ಜನವರಿ 16 ರಂದು ದೀಪಕ್ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕೆಲಸಕ್ಕಾಗಿ ಕೋಝಿಕ್ಕೋಡ್‌ನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದಾಗ, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ, ದೀಪಕ್ ಅವರ ಮೊಣಕೈ ತನ್ನ ದೇಹಕ್ಕೆ ತಾಗಿದೆ. ಅವರು ದುರುದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂದು ವಿಡಿಯೋ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದರು.

ದೀಪಕ್ ತನ್ನ ದೇಹಕ್ಕೆ ಉದ್ಧೇಶಪೂರ್ವಕವಾಗಿ ಕೈ ತಾಗಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶಿಮ್ಜಿತಾ ಆರೋಪಿಸಿದರೆ, ದೀಪಕ್ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ಅದು ಆಕಸ್ಮಿಕ ಘಟನೆ ಎಂದಿದ್ದಾರೆ. ಶಿಮ್ಜಿತಾ ಹಂಚಿಕೊಂಡ ವಿಡಿಯೋ ವೈರಲ್ ಆದ ಬಳಿಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಚಾರ ಕೇರಳ ಮಾತ್ರವಲ್ಲದೆ ಕರ್ನಾಟಕ, ತಮಿಳುನಾಡು ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಮ್ಜಿತಾ ಅವರು ತನ್ನ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ನಲ್ಲಿ ಆಕೆ ಮನಶ್ಶಾಸ್ತ್ರಜ್ಞೆ ಮತ್ತು ವಾಣಿಜ್ಯ ಉಪನ್ಯಾಸಕಿ ಎಂದು ಹೇಳಿಕೊಂಡಿದ್ದಾರೆ. ಕೆಲ ವರದಿಗಳು ಶಿಮ್ಜಿತಾ ಮುಸ್ಲಿಂ ಲೀಗ್ ಪಕ್ಷದ ಸ್ಥಳೀಯ ನಾಯಕಿ ಎಂದಿದೆ. ಎಲ್ಲಾ ಹೇಳಿಕೆಗಳು ಮತ್ತು ಸಂಬಂಧಿತ ವರದಿಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...