Homeಮುಖಪುಟಮಹಾರಾಷ್ಟ್ರ: ಧಂಗರ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ವ್ಯಕ್ತಿ ಆತ್ಮಹತ್ಯೆ

ಮಹಾರಾಷ್ಟ್ರ: ಧಂಗರ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಧಂಗರ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ 37 ವರ್ಷದ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕವತೆ ಮಹಂಕಲ್ ತಹಸಿಲ್‌ನ ಅಬಚಿವಾಡಿ ನಿವಾಸಿ ಬಿರುದೇವ್ ಖರ್ಜೆ ಅವರ ಶವ ಭಾನುವಾರ ಮಧ್ಯಾಹ್ನ ಅವರ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತನ ಜೇಬಿನಲ್ಲಿ ಧಂಗರ್‌ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಪತ್ರವು ಪತ್ತೆಯಾಗಿದೆ ಎಂದು ಉಮ್ಡಿ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ಧಂಗರ್ ಅಥವಾ ಕುರುಬ ಸಮುದಾಯವನ್ನು ಅಲೆಮಾರಿ ಬುಡಕಟ್ಟುಗಳ (VJNT) ವರ್ಗದಲ್ಲಿ ವರ್ಗೀಕರಿಸಲಾಗಿದೆ. ಆದರೆ ಎಸ್‌ಟಿ ವರ್ಗಕ್ಕೆ ಸೇರಿಸಬೇಕೆಂದು ಸಮುದಾಯ ಪ್ರತಿಭಟನೆ ನಡೆಸುತ್ತಿದೆ.

ಧಂಗರ್ ಸಮುದಾಯದ ಖರ್ಜೆ ಅವರು ಮೀಸಲಾತಿಗಾಗಿ ತಮ್ಮ ಜೀವನವನ್ನು ಅಂತ್ಯಗೊಳಿಸಿರುವುದು ದುರದೃಷ್ಟಕರ ಘಟನೆ ಎಂದು ಬಿಜೆಪಿ ಎಂಎಲ್ಸಿ ಗೋಪಿಚಂದ್ ಧಂಗರ್ ಹೇಳಿದ್ದಾರೆ.

ಧಂಗರ್ ಸಮುದಾಯವು ಪರಿಶಿಷ್ಟ ಪಂಗಡ(ST) ಪಟ್ಟಿಯ ಭಾಗವಾಗಿಲ್ಲ. ಬದಲಾಗಿ ಧಂಗಡ್ ಎಂದು ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಧಂಗರ್ ಸಮುದಾಯದ ಮುಖಂಡರು ಹಲವಾರು ವರ್ಷಗಳಿಂದ ಮಹಾರಾಷ್ಟ್ರ ಸರಕಾರದ ಬಳಿ ಧಂಗಡ್ ಎಂಬ ಶೀರ್ಷಿಕೆಯ ಯಾವುದೇ ಸಮುದಾಯ ಇಲ್ಲ ಮತ್ತು ಪಟ್ಟಿಯಲ್ಲಿ ನಮೂದನ್ನು ತಪ್ಪಾಗಿ ಬರೆಯಲಾಗಿದೆ ಎಂದು ಹೇಳಿದ್ದರು.

ಸರ್ಕಾರ ಅದನ್ನು ಸರಿಪಡಿಸಿ ಧಂಗಡ್ ಬದಲು ಧಂಗರ್ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಈ ವಿಚಾರವಾಗಿ ಈ ಮೊದಲು ಪ್ರತಿಭಟನೆ ನಡೆದಿತ್ತು. ಈ ವೇಳೆ ಸಮುದಾಯಕ್ಕೆ ಸರಕಾರದಿಂದ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆಯಲಾಗಿತ್ತು.

ಅಹ್ಮದ್‌ನಗರ ಜಿಲ್ಲೆಯ ಚೋಂಡಿಯಲ್ಲಿ ಸೆಪ್ಟಂಬರ್‌ನಲ್ಲಿ ಹಿರಿಯ ಧಂಗರ್ ನಾಯಕ ಸುರೇಶ್ ಬಂಡಗರ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಮತ್ತು ಇತರ ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಮುಂಬೈನ ಸಹ್ಯಾದ್ರಿ ರಾಜ್ಯ ಅತಿಥಿಗೃಹದಲ್ಲಿ ಸಭೆ ನಡೆಸಿದ್ದರು. ಬೇಡಿಕೆ ಈಡೇರಿಕೆಯ ಭರವಸೆ ನೀಡಿದ್ದರು.

ಇದನ್ನು ಓದಿ: ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...