Homeಮುಖಪುಟಸುವೆಂದು ಬೆಂಗಾವಲು ವಾಹನಕ್ಕೆ ಸಿಲುಕಿ ವ್ಯಕ್ತಿ ಸಾವು; ಟಿಎಂಸಿ ಪ್ರತಿಭಟನೆ

ಸುವೆಂದು ಬೆಂಗಾವಲು ವಾಹನಕ್ಕೆ ಸಿಲುಕಿ ವ್ಯಕ್ತಿ ಸಾವು; ಟಿಎಂಸಿ ಪ್ರತಿಭಟನೆ

- Advertisement -
- Advertisement -

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೆಂದು ಅಧಿಕಾರಿ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ ಪ್ರತಿಭಟನಾ ರ್‍ಯಾಲಿ ನಡೆಸಿದೆ.

ಝೆಡ್‌+ ವರ್ಗದ ಭದ್ರತೆಯನ್ನು ಪಡೆಯುವ ಸುವೆಂದು ಅಧಿಕಾರಿ ಆರೋಪವನ್ನು ನಿರಾಕರಿಸಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆಯುವ ಮೊದಲೇ ನಮ್ಮ ಬೆಂಗಾವಲು ಪಡೆ ಈ ಪ್ರದೇಶವನ್ನು ಹಾದು ಹೋಗಿದೆ ಎಂದು ಅವರು ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ಹಾದು ಹೋಗುತ್ತಿದ್ದ ವಿಐಪಿ ಬೆಂಗಾವಲು ವಾಹನವೊಂದಕ್ಕೆ ಸಿಲುಕಿ ಈ ಪ್ರದೇಶದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲೆಯ ಚಂಡೀಪುರದ ಜನರು ರಸ್ತೆ ತಡೆ ನಡೆಸಿದ್ದಾರೆ.

ವ್ಯಕ್ತಿಯು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಿರಿಯ ನಾಯಕ ಡೋಲಾ ಸೇನ್ ನೇತೃತ್ವದಲ್ಲಿ ಟಿಎಂಸಿ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಸುವೆಂದು ಅಧಿಕಾರಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನಾ ರ್‍ಯಾಲಿಯನ್ನು ನಡೆಸಿದ್ದಾರೆ.

“ಒಬ್ಬ ವ್ಯಕ್ತಿ ಎಷ್ಟು ಅಮಾನವೀಯನಾಗಿರುತ್ತಾನೆ ಎಂದರೆ ತನ್ನ ಬೆಂಗಾವಲು ಪಡೆಗೆ ವ್ಯಕ್ತಿಯೊಬ್ಬರು ಸಿಲುಕಿದ ನಂತರವೂ ಸಂತ್ರಸ್ತ ವ್ಯಕ್ತಿಯನ್ನು ನೋಡಬೇಕೆಂದು ಅವರು ಚಿಂತಿಸಲಿಲ್ಲ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಬಹುದಿತ್ತು. ಸುವೆಂದು ಅಧಿಕಾರಿ ಜೊತೆಗಿರುವ ಭದ್ರತಾ ಸಿಬ್ಬಂದಿ ಸಂತ್ರಸ್ತ ವ್ಯಕ್ತಿಗೆ ಸಹಾಯ ಮಾಡಬಹುದಿತ್ತು” ಎಂದು ಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಐಪಿ ಸಂಸ್ಕೃತಿಯ ವಿರುದ್ಧ ಸಂದೇಶ ರವಾನಿಸಲು ಬಿಜೆಪಿ ನಾಯಕನನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಿಎಂಸಿ ವಕ್ತಾರ ಕುನಾಲ್ ಘೋಷ್ ಕೂಡ ಸುವೆಂದು ಅಧಿಕಾರಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ ಈ ಆರೋಪ ನಿರಾಧಾರ ಎಂದು ಸುವೆಂದು ಹೇಳಿಕೊಂಡಿದ್ದಾರೆ. “ಘಟನೆ ಸಂಭವಿಸುವ ಮೊದಲೇ ನನ್ನ ಬೆಂಗಾವಲು ಪಡೆ ಈ ಪ್ರದೇಶವನ್ನು ದಾಟಿತ್ತು. ಸೂಕ್ತ ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಷಯವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿದ್ದಾರೆ. ಅಧಿಕಾರಿಗೆ ಝೆಡ್ + ಭದ್ರತೆ ಸಿಗುವುದರಿಂದ ಯಾರಾದರೂ ಭದ್ರತಾ ವಲಯವನ್ನು ಹೇಗೆ ಉಲ್ಲಂಘಿಸಬಹುದು ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಮತ್ತು ಸುವೆಂದು ಅಧಿಕಾರಿಯವರ ಹೆಸರು ಕಡಿಸುವ ಪ್ರಯತ್ನ ಇದಾಗಿದೆ. ನಾವು ಅದನ್ನು ಖಂಡಿಸುತ್ತೇವೆ. ಆದರೆ ಝೆಡ್‌ + ರಕ್ಷಣೆಯ ಕಾರಣ ರಸ್ತೆಯನ್ನು ತೆರವು ಮಾಡುವುದಕ್ಕೆ ರಾಜ್ಯ ಪೊಲೀಸರಿಗೆ ಅಧಿಕಾರವಿದೆ. ಭದ್ರತೆಯಲ್ಲಿ ಆಗಿರುವ ಲೋಪದ ಬಗ್ಗೆ ಅವರು ಉತ್ತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...