Homeಮುಖಪುಟಸುವೆಂದು ಬೆಂಗಾವಲು ವಾಹನಕ್ಕೆ ಸಿಲುಕಿ ವ್ಯಕ್ತಿ ಸಾವು; ಟಿಎಂಸಿ ಪ್ರತಿಭಟನೆ

ಸುವೆಂದು ಬೆಂಗಾವಲು ವಾಹನಕ್ಕೆ ಸಿಲುಕಿ ವ್ಯಕ್ತಿ ಸಾವು; ಟಿಎಂಸಿ ಪ್ರತಿಭಟನೆ

- Advertisement -
- Advertisement -

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೆಂದು ಅಧಿಕಾರಿ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ ಪ್ರತಿಭಟನಾ ರ್‍ಯಾಲಿ ನಡೆಸಿದೆ.

ಝೆಡ್‌+ ವರ್ಗದ ಭದ್ರತೆಯನ್ನು ಪಡೆಯುವ ಸುವೆಂದು ಅಧಿಕಾರಿ ಆರೋಪವನ್ನು ನಿರಾಕರಿಸಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆಯುವ ಮೊದಲೇ ನಮ್ಮ ಬೆಂಗಾವಲು ಪಡೆ ಈ ಪ್ರದೇಶವನ್ನು ಹಾದು ಹೋಗಿದೆ ಎಂದು ಅವರು ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ಹಾದು ಹೋಗುತ್ತಿದ್ದ ವಿಐಪಿ ಬೆಂಗಾವಲು ವಾಹನವೊಂದಕ್ಕೆ ಸಿಲುಕಿ ಈ ಪ್ರದೇಶದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲೆಯ ಚಂಡೀಪುರದ ಜನರು ರಸ್ತೆ ತಡೆ ನಡೆಸಿದ್ದಾರೆ.

ವ್ಯಕ್ತಿಯು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಿರಿಯ ನಾಯಕ ಡೋಲಾ ಸೇನ್ ನೇತೃತ್ವದಲ್ಲಿ ಟಿಎಂಸಿ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಸುವೆಂದು ಅಧಿಕಾರಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನಾ ರ್‍ಯಾಲಿಯನ್ನು ನಡೆಸಿದ್ದಾರೆ.

“ಒಬ್ಬ ವ್ಯಕ್ತಿ ಎಷ್ಟು ಅಮಾನವೀಯನಾಗಿರುತ್ತಾನೆ ಎಂದರೆ ತನ್ನ ಬೆಂಗಾವಲು ಪಡೆಗೆ ವ್ಯಕ್ತಿಯೊಬ್ಬರು ಸಿಲುಕಿದ ನಂತರವೂ ಸಂತ್ರಸ್ತ ವ್ಯಕ್ತಿಯನ್ನು ನೋಡಬೇಕೆಂದು ಅವರು ಚಿಂತಿಸಲಿಲ್ಲ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಬಹುದಿತ್ತು. ಸುವೆಂದು ಅಧಿಕಾರಿ ಜೊತೆಗಿರುವ ಭದ್ರತಾ ಸಿಬ್ಬಂದಿ ಸಂತ್ರಸ್ತ ವ್ಯಕ್ತಿಗೆ ಸಹಾಯ ಮಾಡಬಹುದಿತ್ತು” ಎಂದು ಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಐಪಿ ಸಂಸ್ಕೃತಿಯ ವಿರುದ್ಧ ಸಂದೇಶ ರವಾನಿಸಲು ಬಿಜೆಪಿ ನಾಯಕನನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಿಎಂಸಿ ವಕ್ತಾರ ಕುನಾಲ್ ಘೋಷ್ ಕೂಡ ಸುವೆಂದು ಅಧಿಕಾರಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ ಈ ಆರೋಪ ನಿರಾಧಾರ ಎಂದು ಸುವೆಂದು ಹೇಳಿಕೊಂಡಿದ್ದಾರೆ. “ಘಟನೆ ಸಂಭವಿಸುವ ಮೊದಲೇ ನನ್ನ ಬೆಂಗಾವಲು ಪಡೆ ಈ ಪ್ರದೇಶವನ್ನು ದಾಟಿತ್ತು. ಸೂಕ್ತ ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಷಯವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿದ್ದಾರೆ. ಅಧಿಕಾರಿಗೆ ಝೆಡ್ + ಭದ್ರತೆ ಸಿಗುವುದರಿಂದ ಯಾರಾದರೂ ಭದ್ರತಾ ವಲಯವನ್ನು ಹೇಗೆ ಉಲ್ಲಂಘಿಸಬಹುದು ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಮತ್ತು ಸುವೆಂದು ಅಧಿಕಾರಿಯವರ ಹೆಸರು ಕಡಿಸುವ ಪ್ರಯತ್ನ ಇದಾಗಿದೆ. ನಾವು ಅದನ್ನು ಖಂಡಿಸುತ್ತೇವೆ. ಆದರೆ ಝೆಡ್‌ + ರಕ್ಷಣೆಯ ಕಾರಣ ರಸ್ತೆಯನ್ನು ತೆರವು ಮಾಡುವುದಕ್ಕೆ ರಾಜ್ಯ ಪೊಲೀಸರಿಗೆ ಅಧಿಕಾರವಿದೆ. ಭದ್ರತೆಯಲ್ಲಿ ಆಗಿರುವ ಲೋಪದ ಬಗ್ಗೆ ಅವರು ಉತ್ತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...