Homeಮುಖಪುಟಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

- Advertisement -
- Advertisement -

ತೆಲಂಗಾಣದ ನಿಝಾಮಾಬಾದ್‌ನ ಸೈಬರ್ ಕ್ರೈಮ್ ಪೊಲೀಸರ ಕಸ್ಟಡಿಯಲ್ಲಿ ಅಲಕುಂಟ ಸಂಪತ್ ಎಂಬ 31 ವರ್ಷದ ಯುವಕ ಸಾವನ್ನಪ್ಪಿದ್ದು, ಪೊಲೀಸರ ಚಿತ್ರಹಿಂಸೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ತಮ್ಮ ಮೇಲಿನ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. “ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ಸಂಪತ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕುಸಿದು ಬಿದ್ದರು ಎಂದು ನಿಝಾಮಾಬಾದ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ)  ಎಲ್. ರಾಜಾ ವೆಂಕಟ್ ರೆಡ್ಡಿ ಶುಕ್ರವಾರ (ಮಾರ್ಚ್ 14, 2025) ತಿಳಿಸಿದ್ದಾರೆ.

ಜಗತ್ಯಾಲ್‌ನಲ್ಲಿ ಮ್ಯಾನ್‌ಪವರ್ ಕನ್ಸಲ್ಟೆನ್ಸಿ ನಡೆಸುತ್ತಿದ್ದ ಸಂಪತ್, ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್, ಮ್ಯಾನ್ಮಾರ್ ಮತ್ತು ಲಾವೋಸ್‌ಗೆ ಕಳುಹಿಸುತ್ತಿದ್ದರು. ಅಲ್ಲಿಗೆ ಹೋದ ಯುವಕರನ್ನು ಉದ್ಯೋಗದಾತರು ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂಬ ಆರೋಪಗಳಿದ್ದವು. ಸಂಪತ್‌ರಿಂದ ಈ ರೀತಿಯ ವಂಚನೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬರು ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತನಿಖೆಯ ಫಲಿತಾಂಶಗಳ ಆಧಾರದ ಮೇಲೆ, ಸಂಪತ್ ಅವರನ್ನು ಮಾರ್ಚ್ 4ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ತನಿಖಾಧಿಕಾರಿಗಳು ಬುಧವಾರ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ತನಿಖೆಯ ಭಾಗವಾಗಿ, ಸೈಬರ್ ಕ್ರೈಮ್ ಪೊಲೀಸ್ ತಂಡಗಳು ಗುರುವಾರ ಸಂಪತ್ ಅವರನ್ನು ಜಗತ್ಯಾಲ್‌ಗೆ ಕರೆದೊಯ್ದಿದ್ದರು. ಶೋಧದ ಸಮಯದಲ್ಲಿ ಅವರಿಂದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ಅವರನ್ನು ನಿಝಾಮಾಬಾದ್‌ಗೆ ವಾಪಸ್ ಕರೆತರಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರ ದೇಹದ ಎಡಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. “ಆಸ್ಪತ್ರೆಯೊಳಗೆ ವೈದ್ಯರ ಬಳಿಗೆ ಅವರು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ನಾವು ರೆಕಾರ್ಡ್ ಮಾಡಿದ್ದೇವೆ” ಎಂದು ಎಸಿಪಿ ಹೇಳಿದ್ದಾರೆ.

ಸಂಪತ್ ಅವರು ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ 10.25 ರ ಸುಮಾರಿಗೆ ಅವರು ಕುಸಿದು ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಆರ್ ಮೂಲಕ ಸಂಪತ್ ಅವರನ್ನು ಉಳಿಸಲು ಪ್ರಯತ್ನಿಸಲಾಯಿತು. ಆದರೆ, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ಗೆ ವಿಚಾರಣೆಗಾಗಿ ಮನವಿ ಸಲ್ಲಿಸಲಾಗಿದೆ. ವೈದ್ಯರ ತಂಡ ಶವಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯ ವಿಡಿಯೊ-ರೆಕಾರ್ಡ್ ಮಾಡಲಾಗಿದೆ.

ಪೊಲೀಸರ ವಿರುದ್ದ ಚಿತ್ರಹಿಂಸೆ ಆರೋಪ

ಸಂಪತ್ ಸಾವಿಗೆ ಕೆಲವೇ ಗಂಟೆಗಳ ಮೊದಲು ತೀವ್ರ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರ ಕುಟುಂಬ ಆರೋಪಿಸಿದೆ. ಆದರೆ, ಇತ್ತೀಚೆಗೆ ಅನೇಕ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ ಎಂದಿರುವ ಪೊಲೀಸರು, ತಮ್ಮ ಮೇಲಿನ ಆರೋಪ ಅಲ್ಲಗಳೆದಿದ್ದಾರೆ. ಆದರೆ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

“ಮಾರ್ಚ್ 13ರ ಸಂಜೆ ತಾನು ಸಂಪತ್ ಅವರನ್ನು ಭೇಟಿಯಾಗಲು ಠಾಣೆಗೆ ಹೋದಾಗ ಪೊಲೀಸರು ಅವರ ಕಾಲಿಗೆ ಲಾಠಿಯಿಂದ ಹೊಡೆಯುತ್ತಿದ್ದರು. “ಪೊಲೀಸರು ನನ್ನ ಮೇಲೆ ಬಿದ್ದು ತೀವ್ರವಾಗಿ ಹೊಡೆಯುತ್ತಿದ್ದಾರೆ. ನನಗೆ ಸಹಿಸಲಾಗುತ್ತಿಲ್ಲ” ಎಂದು ಸಂಪತ್ ಹೇಳಿದರು. ಅವರು ನಡೆಯಲು ಕಷ್ಟಪಡುತ್ತಿದ್ದರು” ಎಂದು ಸಂಪತ್ ಸಹೋದರ ಹೇಳಿದ್ದಾಗಿ ವರದಿಯಾಗಿದೆ.

ಸಂಪತ್ ಹಿಂದುಳಿದ ವರ್ಗದ ವಡ್ಡೇರ ಸಮುದಾಯಕ್ಕೆ ಸೇರಿದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....