Homeಮುಖಪುಟಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

- Advertisement -
- Advertisement -

ತೆಲಂಗಾಣದ ನಿಝಾಮಾಬಾದ್‌ನ ಸೈಬರ್ ಕ್ರೈಮ್ ಪೊಲೀಸರ ಕಸ್ಟಡಿಯಲ್ಲಿ ಅಲಕುಂಟ ಸಂಪತ್ ಎಂಬ 31 ವರ್ಷದ ಯುವಕ ಸಾವನ್ನಪ್ಪಿದ್ದು, ಪೊಲೀಸರ ಚಿತ್ರಹಿಂಸೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ತಮ್ಮ ಮೇಲಿನ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. “ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ಸಂಪತ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕುಸಿದು ಬಿದ್ದರು ಎಂದು ನಿಝಾಮಾಬಾದ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ)  ಎಲ್. ರಾಜಾ ವೆಂಕಟ್ ರೆಡ್ಡಿ ಶುಕ್ರವಾರ (ಮಾರ್ಚ್ 14, 2025) ತಿಳಿಸಿದ್ದಾರೆ.

ಜಗತ್ಯಾಲ್‌ನಲ್ಲಿ ಮ್ಯಾನ್‌ಪವರ್ ಕನ್ಸಲ್ಟೆನ್ಸಿ ನಡೆಸುತ್ತಿದ್ದ ಸಂಪತ್, ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್, ಮ್ಯಾನ್ಮಾರ್ ಮತ್ತು ಲಾವೋಸ್‌ಗೆ ಕಳುಹಿಸುತ್ತಿದ್ದರು. ಅಲ್ಲಿಗೆ ಹೋದ ಯುವಕರನ್ನು ಉದ್ಯೋಗದಾತರು ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂಬ ಆರೋಪಗಳಿದ್ದವು. ಸಂಪತ್‌ರಿಂದ ಈ ರೀತಿಯ ವಂಚನೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬರು ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತನಿಖೆಯ ಫಲಿತಾಂಶಗಳ ಆಧಾರದ ಮೇಲೆ, ಸಂಪತ್ ಅವರನ್ನು ಮಾರ್ಚ್ 4ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ತನಿಖಾಧಿಕಾರಿಗಳು ಬುಧವಾರ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ತನಿಖೆಯ ಭಾಗವಾಗಿ, ಸೈಬರ್ ಕ್ರೈಮ್ ಪೊಲೀಸ್ ತಂಡಗಳು ಗುರುವಾರ ಸಂಪತ್ ಅವರನ್ನು ಜಗತ್ಯಾಲ್‌ಗೆ ಕರೆದೊಯ್ದಿದ್ದರು. ಶೋಧದ ಸಮಯದಲ್ಲಿ ಅವರಿಂದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ಅವರನ್ನು ನಿಝಾಮಾಬಾದ್‌ಗೆ ವಾಪಸ್ ಕರೆತರಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರ ದೇಹದ ಎಡಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. “ಆಸ್ಪತ್ರೆಯೊಳಗೆ ವೈದ್ಯರ ಬಳಿಗೆ ಅವರು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ನಾವು ರೆಕಾರ್ಡ್ ಮಾಡಿದ್ದೇವೆ” ಎಂದು ಎಸಿಪಿ ಹೇಳಿದ್ದಾರೆ.

ಸಂಪತ್ ಅವರು ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ 10.25 ರ ಸುಮಾರಿಗೆ ಅವರು ಕುಸಿದು ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಆರ್ ಮೂಲಕ ಸಂಪತ್ ಅವರನ್ನು ಉಳಿಸಲು ಪ್ರಯತ್ನಿಸಲಾಯಿತು. ಆದರೆ, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ಗೆ ವಿಚಾರಣೆಗಾಗಿ ಮನವಿ ಸಲ್ಲಿಸಲಾಗಿದೆ. ವೈದ್ಯರ ತಂಡ ಶವಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯ ವಿಡಿಯೊ-ರೆಕಾರ್ಡ್ ಮಾಡಲಾಗಿದೆ.

ಪೊಲೀಸರ ವಿರುದ್ದ ಚಿತ್ರಹಿಂಸೆ ಆರೋಪ

ಸಂಪತ್ ಸಾವಿಗೆ ಕೆಲವೇ ಗಂಟೆಗಳ ಮೊದಲು ತೀವ್ರ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರ ಕುಟುಂಬ ಆರೋಪಿಸಿದೆ. ಆದರೆ, ಇತ್ತೀಚೆಗೆ ಅನೇಕ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ ಎಂದಿರುವ ಪೊಲೀಸರು, ತಮ್ಮ ಮೇಲಿನ ಆರೋಪ ಅಲ್ಲಗಳೆದಿದ್ದಾರೆ. ಆದರೆ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

“ಮಾರ್ಚ್ 13ರ ಸಂಜೆ ತಾನು ಸಂಪತ್ ಅವರನ್ನು ಭೇಟಿಯಾಗಲು ಠಾಣೆಗೆ ಹೋದಾಗ ಪೊಲೀಸರು ಅವರ ಕಾಲಿಗೆ ಲಾಠಿಯಿಂದ ಹೊಡೆಯುತ್ತಿದ್ದರು. “ಪೊಲೀಸರು ನನ್ನ ಮೇಲೆ ಬಿದ್ದು ತೀವ್ರವಾಗಿ ಹೊಡೆಯುತ್ತಿದ್ದಾರೆ. ನನಗೆ ಸಹಿಸಲಾಗುತ್ತಿಲ್ಲ” ಎಂದು ಸಂಪತ್ ಹೇಳಿದರು. ಅವರು ನಡೆಯಲು ಕಷ್ಟಪಡುತ್ತಿದ್ದರು” ಎಂದು ಸಂಪತ್ ಸಹೋದರ ಹೇಳಿದ್ದಾಗಿ ವರದಿಯಾಗಿದೆ.

ಸಂಪತ್ ಹಿಂದುಳಿದ ವರ್ಗದ ವಡ್ಡೇರ ಸಮುದಾಯಕ್ಕೆ ಸೇರಿದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...