Homeಮುಖಪುಟಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

- Advertisement -
- Advertisement -

ತೆಲಂಗಾಣದ ನಿಝಾಮಾಬಾದ್‌ನ ಸೈಬರ್ ಕ್ರೈಮ್ ಪೊಲೀಸರ ಕಸ್ಟಡಿಯಲ್ಲಿ ಅಲಕುಂಟ ಸಂಪತ್ ಎಂಬ 31 ವರ್ಷದ ಯುವಕ ಸಾವನ್ನಪ್ಪಿದ್ದು, ಪೊಲೀಸರ ಚಿತ್ರಹಿಂಸೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ತಮ್ಮ ಮೇಲಿನ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. “ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ಸಂಪತ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕುಸಿದು ಬಿದ್ದರು ಎಂದು ನಿಝಾಮಾಬಾದ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ)  ಎಲ್. ರಾಜಾ ವೆಂಕಟ್ ರೆಡ್ಡಿ ಶುಕ್ರವಾರ (ಮಾರ್ಚ್ 14, 2025) ತಿಳಿಸಿದ್ದಾರೆ.

ಜಗತ್ಯಾಲ್‌ನಲ್ಲಿ ಮ್ಯಾನ್‌ಪವರ್ ಕನ್ಸಲ್ಟೆನ್ಸಿ ನಡೆಸುತ್ತಿದ್ದ ಸಂಪತ್, ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್, ಮ್ಯಾನ್ಮಾರ್ ಮತ್ತು ಲಾವೋಸ್‌ಗೆ ಕಳುಹಿಸುತ್ತಿದ್ದರು. ಅಲ್ಲಿಗೆ ಹೋದ ಯುವಕರನ್ನು ಉದ್ಯೋಗದಾತರು ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂಬ ಆರೋಪಗಳಿದ್ದವು. ಸಂಪತ್‌ರಿಂದ ಈ ರೀತಿಯ ವಂಚನೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬರು ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತನಿಖೆಯ ಫಲಿತಾಂಶಗಳ ಆಧಾರದ ಮೇಲೆ, ಸಂಪತ್ ಅವರನ್ನು ಮಾರ್ಚ್ 4ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ತನಿಖಾಧಿಕಾರಿಗಳು ಬುಧವಾರ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ತನಿಖೆಯ ಭಾಗವಾಗಿ, ಸೈಬರ್ ಕ್ರೈಮ್ ಪೊಲೀಸ್ ತಂಡಗಳು ಗುರುವಾರ ಸಂಪತ್ ಅವರನ್ನು ಜಗತ್ಯಾಲ್‌ಗೆ ಕರೆದೊಯ್ದಿದ್ದರು. ಶೋಧದ ಸಮಯದಲ್ಲಿ ಅವರಿಂದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ಅವರನ್ನು ನಿಝಾಮಾಬಾದ್‌ಗೆ ವಾಪಸ್ ಕರೆತರಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರ ದೇಹದ ಎಡಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. “ಆಸ್ಪತ್ರೆಯೊಳಗೆ ವೈದ್ಯರ ಬಳಿಗೆ ಅವರು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ನಾವು ರೆಕಾರ್ಡ್ ಮಾಡಿದ್ದೇವೆ” ಎಂದು ಎಸಿಪಿ ಹೇಳಿದ್ದಾರೆ.

ಸಂಪತ್ ಅವರು ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ 10.25 ರ ಸುಮಾರಿಗೆ ಅವರು ಕುಸಿದು ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಆರ್ ಮೂಲಕ ಸಂಪತ್ ಅವರನ್ನು ಉಳಿಸಲು ಪ್ರಯತ್ನಿಸಲಾಯಿತು. ಆದರೆ, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ಗೆ ವಿಚಾರಣೆಗಾಗಿ ಮನವಿ ಸಲ್ಲಿಸಲಾಗಿದೆ. ವೈದ್ಯರ ತಂಡ ಶವಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯ ವಿಡಿಯೊ-ರೆಕಾರ್ಡ್ ಮಾಡಲಾಗಿದೆ.

ಪೊಲೀಸರ ವಿರುದ್ದ ಚಿತ್ರಹಿಂಸೆ ಆರೋಪ

ಸಂಪತ್ ಸಾವಿಗೆ ಕೆಲವೇ ಗಂಟೆಗಳ ಮೊದಲು ತೀವ್ರ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರ ಕುಟುಂಬ ಆರೋಪಿಸಿದೆ. ಆದರೆ, ಇತ್ತೀಚೆಗೆ ಅನೇಕ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ ಎಂದಿರುವ ಪೊಲೀಸರು, ತಮ್ಮ ಮೇಲಿನ ಆರೋಪ ಅಲ್ಲಗಳೆದಿದ್ದಾರೆ. ಆದರೆ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

“ಮಾರ್ಚ್ 13ರ ಸಂಜೆ ತಾನು ಸಂಪತ್ ಅವರನ್ನು ಭೇಟಿಯಾಗಲು ಠಾಣೆಗೆ ಹೋದಾಗ ಪೊಲೀಸರು ಅವರ ಕಾಲಿಗೆ ಲಾಠಿಯಿಂದ ಹೊಡೆಯುತ್ತಿದ್ದರು. “ಪೊಲೀಸರು ನನ್ನ ಮೇಲೆ ಬಿದ್ದು ತೀವ್ರವಾಗಿ ಹೊಡೆಯುತ್ತಿದ್ದಾರೆ. ನನಗೆ ಸಹಿಸಲಾಗುತ್ತಿಲ್ಲ” ಎಂದು ಸಂಪತ್ ಹೇಳಿದರು. ಅವರು ನಡೆಯಲು ಕಷ್ಟಪಡುತ್ತಿದ್ದರು” ಎಂದು ಸಂಪತ್ ಸಹೋದರ ಹೇಳಿದ್ದಾಗಿ ವರದಿಯಾಗಿದೆ.

ಸಂಪತ್ ಹಿಂದುಳಿದ ವರ್ಗದ ವಡ್ಡೇರ ಸಮುದಾಯಕ್ಕೆ ಸೇರಿದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...