Homeಮುಖಪುಟಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

- Advertisement -
- Advertisement -

ತೆಲಂಗಾಣದ ನಿಝಾಮಾಬಾದ್‌ನ ಸೈಬರ್ ಕ್ರೈಮ್ ಪೊಲೀಸರ ಕಸ್ಟಡಿಯಲ್ಲಿ ಅಲಕುಂಟ ಸಂಪತ್ ಎಂಬ 31 ವರ್ಷದ ಯುವಕ ಸಾವನ್ನಪ್ಪಿದ್ದು, ಪೊಲೀಸರ ಚಿತ್ರಹಿಂಸೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ತಮ್ಮ ಮೇಲಿನ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. “ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ಸಂಪತ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕುಸಿದು ಬಿದ್ದರು ಎಂದು ನಿಝಾಮಾಬಾದ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ)  ಎಲ್. ರಾಜಾ ವೆಂಕಟ್ ರೆಡ್ಡಿ ಶುಕ್ರವಾರ (ಮಾರ್ಚ್ 14, 2025) ತಿಳಿಸಿದ್ದಾರೆ.

ಜಗತ್ಯಾಲ್‌ನಲ್ಲಿ ಮ್ಯಾನ್‌ಪವರ್ ಕನ್ಸಲ್ಟೆನ್ಸಿ ನಡೆಸುತ್ತಿದ್ದ ಸಂಪತ್, ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್, ಮ್ಯಾನ್ಮಾರ್ ಮತ್ತು ಲಾವೋಸ್‌ಗೆ ಕಳುಹಿಸುತ್ತಿದ್ದರು. ಅಲ್ಲಿಗೆ ಹೋದ ಯುವಕರನ್ನು ಉದ್ಯೋಗದಾತರು ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂಬ ಆರೋಪಗಳಿದ್ದವು. ಸಂಪತ್‌ರಿಂದ ಈ ರೀತಿಯ ವಂಚನೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬರು ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತನಿಖೆಯ ಫಲಿತಾಂಶಗಳ ಆಧಾರದ ಮೇಲೆ, ಸಂಪತ್ ಅವರನ್ನು ಮಾರ್ಚ್ 4ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ತನಿಖಾಧಿಕಾರಿಗಳು ಬುಧವಾರ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ತನಿಖೆಯ ಭಾಗವಾಗಿ, ಸೈಬರ್ ಕ್ರೈಮ್ ಪೊಲೀಸ್ ತಂಡಗಳು ಗುರುವಾರ ಸಂಪತ್ ಅವರನ್ನು ಜಗತ್ಯಾಲ್‌ಗೆ ಕರೆದೊಯ್ದಿದ್ದರು. ಶೋಧದ ಸಮಯದಲ್ಲಿ ಅವರಿಂದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ಅವರನ್ನು ನಿಝಾಮಾಬಾದ್‌ಗೆ ವಾಪಸ್ ಕರೆತರಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರ ದೇಹದ ಎಡಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. “ಆಸ್ಪತ್ರೆಯೊಳಗೆ ವೈದ್ಯರ ಬಳಿಗೆ ಅವರು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ನಾವು ರೆಕಾರ್ಡ್ ಮಾಡಿದ್ದೇವೆ” ಎಂದು ಎಸಿಪಿ ಹೇಳಿದ್ದಾರೆ.

ಸಂಪತ್ ಅವರು ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ 10.25 ರ ಸುಮಾರಿಗೆ ಅವರು ಕುಸಿದು ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಆರ್ ಮೂಲಕ ಸಂಪತ್ ಅವರನ್ನು ಉಳಿಸಲು ಪ್ರಯತ್ನಿಸಲಾಯಿತು. ಆದರೆ, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ಗೆ ವಿಚಾರಣೆಗಾಗಿ ಮನವಿ ಸಲ್ಲಿಸಲಾಗಿದೆ. ವೈದ್ಯರ ತಂಡ ಶವಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯ ವಿಡಿಯೊ-ರೆಕಾರ್ಡ್ ಮಾಡಲಾಗಿದೆ.

ಪೊಲೀಸರ ವಿರುದ್ದ ಚಿತ್ರಹಿಂಸೆ ಆರೋಪ

ಸಂಪತ್ ಸಾವಿಗೆ ಕೆಲವೇ ಗಂಟೆಗಳ ಮೊದಲು ತೀವ್ರ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರ ಕುಟುಂಬ ಆರೋಪಿಸಿದೆ. ಆದರೆ, ಇತ್ತೀಚೆಗೆ ಅನೇಕ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ ಎಂದಿರುವ ಪೊಲೀಸರು, ತಮ್ಮ ಮೇಲಿನ ಆರೋಪ ಅಲ್ಲಗಳೆದಿದ್ದಾರೆ. ಆದರೆ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

“ಮಾರ್ಚ್ 13ರ ಸಂಜೆ ತಾನು ಸಂಪತ್ ಅವರನ್ನು ಭೇಟಿಯಾಗಲು ಠಾಣೆಗೆ ಹೋದಾಗ ಪೊಲೀಸರು ಅವರ ಕಾಲಿಗೆ ಲಾಠಿಯಿಂದ ಹೊಡೆಯುತ್ತಿದ್ದರು. “ಪೊಲೀಸರು ನನ್ನ ಮೇಲೆ ಬಿದ್ದು ತೀವ್ರವಾಗಿ ಹೊಡೆಯುತ್ತಿದ್ದಾರೆ. ನನಗೆ ಸಹಿಸಲಾಗುತ್ತಿಲ್ಲ” ಎಂದು ಸಂಪತ್ ಹೇಳಿದರು. ಅವರು ನಡೆಯಲು ಕಷ್ಟಪಡುತ್ತಿದ್ದರು” ಎಂದು ಸಂಪತ್ ಸಹೋದರ ಹೇಳಿದ್ದಾಗಿ ವರದಿಯಾಗಿದೆ.

ಸಂಪತ್ ಹಿಂದುಳಿದ ವರ್ಗದ ವಡ್ಡೇರ ಸಮುದಾಯಕ್ಕೆ ಸೇರಿದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...