Homeಮುಖಪುಟಪಿಎಂ ಕೇರ್ಸ್‌ಗೆ 2.5 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಸಿಗಲಿಲ್ಲ ಬೆಡ್, ಮತ್ತೆಷ್ಟು ದೇಣಿಗೆ ನೀಡಲಿ...

ಪಿಎಂ ಕೇರ್ಸ್‌ಗೆ 2.5 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಸಿಗಲಿಲ್ಲ ಬೆಡ್, ಮತ್ತೆಷ್ಟು ದೇಣಿಗೆ ನೀಡಲಿ ಎಂದ ವ್ಯಕ್ತಿ

- Advertisement -
- Advertisement -

ದೇಶದಲ್ಲಿ ಉಲ್ಬಣವಾಗುತ್ತಿರುವ ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಂಡ್‌ ಸ್ಥಾಪಿಸಿತ್ತು. ಹಲವು ಬೆಳವಣಿಗೆಗಳ ಬಳಿಕ ಅದೊಂದು ಸರ್ಕಾರೇತರ ಸಂಸ್ಥೆ ಎಂದು ಸರ್ಕಾರ ಘೋಷಿಸಿ, ಅದರ ವಿವರ ನೀಡಲಾಗುವುದಿಲ್ಲ ಎಂದಿದೆ.

ದೇಧ-ವಿದೇಶಗಳ ಕೋಟ್ಯಾಂತರ ಮಂದಿ ಪಿಎಂ ಕೇರ್ಸ್ ಫಂಡ್‌ಗೆ ಕೋಟಿ-ಕೋಟಿ ದೇಣಿಗೆ ನೀಡಿದ್ದಾರೆ. ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ದೇಣಿಗೆ ನೀಡಿದ್ದು, ಜನರಿಗೆ ಸಹಾಯ ಮಾಡಲು ತಿಳಿಸಿದ್ದಾರೆ. ಆದರೆ, ಇದ್ಯಾವುದು ಜನರಿಗೆ ದೊರಕುತ್ತಿಲ್ಲ ಎಂದು ಹಲವು ಟೀಕೆಗಳು ಕೇಳಿಬಂದಿವೆ. ಇವುಗಳ ಜೊತೆಗೆ ಅಹ್ಮದಾಬಾದ್‌ನ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿ ಈ ಟೀಕೆಗೆ ಪುಷ್ಠಿ ನೀಡಿದ್ದಾರೆ.

ಅಹ್ಮದಾಬಾದ್‌ನ ವಿಜಯ್ ಪರಿಕ್ ಎಂಬುವವರು ಪಿಎಂ ಕೇರ್ಸ್ ಫಂಡ್‌ಗೆ 2 ಲಕ್ಷದ 51 ಸಾವಿರ ರೂಪಾಯಿಗಳನ್ನು ದೇಣಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಇಷ್ಟು ದೇಣಿಗೆ ನೀಡಿದ್ದರು ನನ್ನ ತಾಯಿಗೆ ಒಂದು ಬೆಡ್ ಸಿಗಲಿಲ್ಲ. ಅವರು ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

“2.51 ಲಕ್ಷ ದೇಣಿಗೆಯಿಂದಾಗಿಯೂ ನನ್ನ ಸಾಯುತ್ತಿರುವ ತಾಯಿಗೆ ಹಾಸಿಗೆ ದೊರಕಲಿಲ್ಲ. ಇನ್ನು ಮುಂದೆ ಬರುತ್ತಿರುವ 3ನೇ ಕೊರೊನಾ ಅಲೆಯಲ್ಲಿ ಬೆಡ್ ಕಾಯ್ದಿರಿಸಲು ನಾನು ಎಷ್ಟು ಹೆಚ್ಚು ದೇಣಿಗೆ ನೀಡಬೇಕೆಂದು ದಯವಿಟ್ಟು ಸಲಹೆ ನೀಡಿ, ನಾನು ಮತ್ತಷ್ಟು ಮನೆಯ ಸದಸ್ಯರನ್ನು ಕಳೆದುಕೊಳ್ಳಲು ಬಯಸುವುದಿಲ್ಲ” ಎಂದು ನೋವಿನಲ್ಲಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್‌ನಾಥ್‌ ಸಿಂಗ್, ಸ್ಮೃತಿ ಇರಾನಿ, ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ.

ಪಿಎಂ ಕೇರ್ಸ್ ಫಂಡ್‌ನ ಪ್ರಸ್ತುತ ಸ್ಥಿತಿ ಮತ್ತು ಭಾರತ ಸರ್ಕಾರದೊಂದಿಗಿನ ಸಂಬಂಧಗಳ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸುವಂತೆ ನಿರ್ದೇಶನ ಕೋರಿ ಉನ್ನತ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ, ಮಾಜಿ ಪತ್ರಕರ್ತ ಸಾಕತ್ ಗೋಖಲೆ ಪಿಐಎಲ್ ಸಲ್ಲಿಸಿದ್ದಾರೆ.


ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...