Homeಕರ್ನಾಟಕಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ...

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

- Advertisement -
- Advertisement -

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ, ನಂತರ ಖುಲಾಸೆಗೊಂಡಿದ್ದ ಕುಶಾಲನಗರದ ಸುರೇಶ್, ತನಗೆ ನೀಡಲಾದ ಪರಿಹಾರದ ಮೊತ್ತವನ್ನು ರೂ. 1 ಲಕ್ಷದಿಂದ 5 ಕೋಟಿಗೆ ಹೆಚ್ಚಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಕಳೆದ ಏಪ್ರಿಲ್ 23ರಂದು ‘ಗೌರವಯುತವಾಗಿ’ ಖುಸಲಾಸೆಗೊಳಿಸಿತ್ತು.

ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ ಮೈಸೂರಿನ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶ ಗುರುರಾಜ್‌ ಸೋಮಕ್ಕಳವರ್‌ ಸೂಚನೆ ನೀಡಿದ್ದರು. ಸುರೇಶ್ ಅವರ ಜಾಮೀನು ಬಾಂಡ್‌ ಮತ್ತು ಅವರ ಶ್ಯೂರಿಟಿ ಬಾಂಡ್‌ ಅನ್ನು ರದ್ದುಗೊಳಿಸಲಾಗಿತ್ತುಲ. ಅಲ್ಲದೆ, ಅವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿತ್ತು.

ಹೆಚ್ಚಿನ ಪರಿಹಾರ ಕೋರಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಸುರೇಶ್, ತನ್ನ ಒಂದೂವರೆ ವರ್ಷದ ಜೀವಿತಾವಧಿ ಮತ್ತು ಸಮಾಜದಲ್ಲಿ ಗೌರವವನ್ನು ಕಳೆದುಕೊಂಡಿದ್ದೇನೆ. ಈ ಅವಧಿಯಲ್ಲಿ ತನ್ನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವಾದಿಸಿದ್ದಾರೆ.

ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ತಾನು ಜೈಲು ಪಾಲಾಗುವಂತೆ ಮಾಡಿದ ಆರೋಪದ ಮೇಲೆ ಕೇವಲ ಒಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗಿದೆ ಎಂದು ಸುರೇಶ್ ತನ್ನ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿರುವ ಭಾಗಿಯಾಗಿರುವ ಇತರ ನಾಲ್ವರು ಪೊಲೀಸರ ವಿರುದ್ಧವೂ ಇಲಾಖಾ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಸುರೇಶ್ ನ್ಯಾಯಾಲಯವನ್ನು ಕೋರಿದ್ದಾರೆ.

ಅಲ್ಲದೆ, ನ್ಯಾಯಾಲಯದ ತೀರ್ಪಿನಲ್ಲಿ ತನ್ನನ್ನು ‘ಆರೋಪಿ’ ಎಂದು ಉಲ್ಲೇಖಿಸಿರುವುದನ್ನು ‘ಸಂತ್ರಸ್ತ’ ಎಂದು ಬದಲಾಯಿಸುವಂತೆ ಸುರೇಶ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸಂತ್ರಸ್ತ ಬುಡಕಟ್ಟು ಸಮುದಾಯದ ಸುರೇಶ್

ಪ್ರಕರಣದ ಹಿನ್ನೆಲೆ : ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ಸುರೇಶ್ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಜೈಲಿನಲ್ಲಿದ್ದ ಸುರೇಶ್ 2023ರಲ್ಲಿ ಜಾಮೀನಿನ ಮೂಲಕ ಬಿಡುಗಡೆಗೊಂಡಿದ್ದರು.

ತಪ್ಪು ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್, ನಾಪತ್ತೆಯಾದ ತನ್ನ ಪತ್ನಿಯ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ 2025ರ ಏಪ್ರಿಲ್ 1ರಂದು ಸುರೇಶ್ ಅವರ ಪತ್ನಿ ಮಲ್ಲಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಪ್ರಿಯಕರ ಗಣೇಶ್ ಜೊತೆ ಪತ್ತೆಯಾಗಿದ್ದರು. ಈ ವಿಚಾರವನ್ನು ವಕೀಲರ ಮೂಲಕ ಸುರೇಶ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯದ ಆದೇಶದಂತೆ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿದ್ದಾಗ ಮಡಿಕೇರಿ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಪೊಲೀಸ್ ವರಿಷ್ಠಾಧಿಕಾರಿಯ ವಿಚಾರಣಾ ವರದಿಯನ್ನು ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಿ.ಜಿ.ಪ್ರಕಾಶ್, ಮಹೇಶ್ ಕುಮಾರ್, ಪ್ರಕಾಶ್ ಎತ್ತಿಮನಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ದೋಷಾರೋಪ ಪಟ್ಟಿಗೆ ಏನು ಆಧಾರವಿದೆ? ಎಂದು ಪ್ರಶ್ನಿಸಿದ್ದರು.

ಸುರೇಶ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪಾಂಡು ಪೂಜಾರಿ ಅವರು, ‘ಪೊಲೀಸರು ಉದ್ದೇಶ ಪೂರ್ವಕವಾಗಿ ಬುಡಕಟ್ಟು ಸಮುದಾಯವನ್ನು ಗುರಿಯಾಗಿಸಿ ಸುಳ್ಳು ಕಥೆ ಸೃಷ್ಟಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿ, ವಿಚಾರಣೆ ಮುಂದೂಡಿದ್ದರು. ಕಾಯ್ದಿರಿಸಿದ ತೀರ್ಪನ್ನು ಏಪ್ರಿಲ್ 23ರಂದು ಪ್ರಕಟಿಸಿದ್ದರು.

ಕುಶಾಲನಗರದ ಮಹಿಳೆ ನಾಪತ್ತೆ…ಮೈಸೂರಿನಲ್ಲಿ ಏಕೆ ಪ್ರಕರಣ?

2021ರ ಜುಲೈನಲ್ಲಿ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ತನ್ನ ಪತ್ನಿ ಕಾಣೆಯಾಗಿದ್ದಾರೆ ಎಂದು ಸುರೇಶ್ ಕುಶಾಲನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಯಾರದ್ದೋ ಶವವನ್ನು ಸುರೇಶ್ ಅವರ ಪತ್ನಿಯದ್ದೇ ಎಂದು ಬಿಂಬಿಸಿದ್ದ ಮೈಸೂರಿನ ಬೆಟ್ಟದಪುರ ಪೊಲೀಸರು, ಸುರೇಶ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸುರೇಶ್‌ಗೆ ನ್ಯಾಯ ದೊರಕಿಸಿಕೊಟ್ಟ ವಕೀಲ ಪಾಂಡು ಪೂಜಾರಿ

ಸುರೇಶ್‌ ಜೈಲಿನಲ್ಲಿದ್ದ ಸಮಯದಲ್ಲಿ ಅವರ ತಂದೆ ಗಾಂಧಿ ವಕೀಲ ಪಾಂಡು ಪೂಜಾರಿ ಅವರನ್ನು ಭೇಟಿಯಾಗಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಮಗನನ್ನು ಜೈಲಿಗೆ ಹಾಕಿರುವ ಬಗ್ಗೆ ತಿಳಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪಾಂಡು ಪೂಜಾರಿ ಸುರೇಶ್‌ ಕುಟುಂಬದಿಂದ ಯಾವುದೇ ಶುಲ್ಕ ಪಡೆಯದೆ ವಾದ ಮಂಡಿಸಿ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ವರದಿಗಳು ಹೇಳಿತ್ತು.

ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...