Homeಮುಖಪುಟಅಕ್ರಮ ಬಾಂಗ್ಲಾದೇಶಿ ವಲಸಿಗ ಎಂದು ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ: ಮಾನವ ಹಕ್ಕು ಆಯೋಗದ...

ಅಕ್ರಮ ಬಾಂಗ್ಲಾದೇಶಿ ವಲಸಿಗ ಎಂದು ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ: ಮಾನವ ಹಕ್ಕು ಆಯೋಗದ ಮೊರೆ ಹೋದ ಕುಟುಂಬ

- Advertisement -
- Advertisement -

ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು 30 ವರ್ಷದ ಖಾಸಗಿ ಶಾಲಾ ವ್ಯಾನ್ ಚಾಲಕನನ್ನು ಬೆಂಗಳೂರಿನ ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಅವರನ್ನು ನೆಲಮಂಗಲದ ವಿದೇಶಿಯರ ಬಂಧನ ಕೇಂದ್ರದಲ್ಲಿ ಇರಿಸಿದ್ದಾರೆ. ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಕಾಯುತ್ತಿದ್ದಾರೆ ಎಂದು ದಿ ಹಿಂದೂ ಆಗಸ್ಟ್ 30ರಂದು ವರದಿ ಮಾಡಿದೆ.

ಆದರೆ, ಬಂಧಿತನ ಕುಟುಂಬಸ್ಥರು ಅವರು ಪಶ್ಚಿಮ ಬಂಗಾಳದ ನಿವಾಸಿ ಎಂದು ಹೇಳಿಕೊಂಡಿದ್ದು, ಕಾನೂನುಬಾಹಿರ ಬಂಧನ ಮತ್ತು ಪೊಲೀಸರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಕೆಎಸ್‌ಎಚ್‌ಆರ್‌ಸಿ) ದೂರು ಸಲ್ಲಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ರಫಿಕುಲ್ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ಇವರು ಪಶ್ಚಿಮ ಬಂಗಾಳದ ಧನಂಜಯ್‌ಪುರದವರೆಂದು ಕುಟುಂಬ ಹೇಳಿಕೊಂಡಿದೆ. ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಖಾಸಗಿ ಶಾಲಾ ವ್ಯಾನ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಹೇಳಿದೆ.

ಮಾವನ ಹಕ್ಕುಗಳ ಆಯೋಗಕ್ಕೆ ದೂರು ನೀಡಿರುವ ಬಂಧಿತ ರಫಿಕುಲ್ ಅವರ ಪತ್ನಿ, ರಫಿಕುಲ್ ಅವರ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಜೊತೆಗೆ, ಪಶ್ಚಿಮ ಬಂಗಾಳದ ಧನಂಜಯ್‌ಪುರದ ನಿವಾಸಿ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ ಪ್ರಮಾಣಪತ್ರವನ್ನೂ ನೀಡಿರುವುದಾಗಿ ಹೇಳಿದ್ದಾರೆ.

ಆದರೆ, ಪೊಲೀಸರು ಅವರು ಸಲ್ಲಿಸಿದ ಎಲ್ಲಾ ದಾಖಲೆಗಳನ್ನು ನಕಲಿ ಎಂದು ತಿರಸ್ಕರಿಸಿದ್ದಾಗಿ ತಿಳಿಸಿದ್ದಾರೆ.

ರಫಿಕುಲ್ ಅವರ ವೈದ್ಯಕೀಯ ಮತ್ತು ಸಾರಿಗೆ ವೆಚ್ಚಗಳಿಗಾಗಿ ಪೊಲೀಸರು 10,000 ರೂಪಾಯಿ ಲಂಚ ಕೇಳಿದ್ದಾರೆ ಎಂದೂ ಪತ್ನಿ ಆರೋಪಿಸಿದ್ದು, ಆ ಹಣವನ್ನು ಪಾವತಿಸಿರುವುದಾಗಿ ಹೇಳಿದ್ದಾರೆ.

ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ, ಆಯೋಗವು ಈ ವಿಷಯವನ್ನು ತಕ್ಷಣವೇ ಪರಿಗಣನೆಗೆ ತೆಗೆದುಕೊಂಡು, ಅಕ್ರಮ ಬಂಧನ ಮತ್ತು ಸುಲಿಗೆಯ ಬಗ್ಗೆ ನ್ಯಾಯಯುತ ಹಾಗೂ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಮತ್ತು ಬಂಧಿತ ರಫಿಕುಲ್ ಅವರ ತಕ್ಷಣ ಬಿಡುಗಡೆಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ವರದಿಯ ಆಧಾರದ ಮೇಲೆ ಸಂಶಯಾಸ್ಪದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ತಮ್ಮಲ್ಲಿರುವ ದಾಖಲೆಗಳೊಂದಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಮುಂದೆ ಇದನ್ನು ಪ್ರಶ್ನಿಸಬಹುದು ಎಂದಿದ್ದಾರೆ.

ದಿ ಹಿಂದೂ ಜೊತೆ ಮಾತನಾಡಿರುವ ಬಂಧಿತನ ಕುಟುಂಬದೊಂದಿಗೆ ಕೆಲಸ ಮಾಡುತ್ತಿರುವ ಬೆಂಗಳೂರಿನ ಹೋರಾಟಗಾರ ಆರ್. ಕಲೀಮುಲ್ಲಾ, “ಇತ್ತೀಚೆಗೆ ಪೊಲೀಸರು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಅವರನ್ನು ‘ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು’ ಎಂಬ ಹಣೆಪಟ್ಟಿ ಕಟ್ಟುತ್ತಿದ್ದಾರೆ. ಈ ವಲಸೆ ಕಾರ್ಮಿಕರು ಕೆಲವು ಸಂದರ್ಭಗಳಲ್ಲಿ ಮತದಾರರ ಗುರುತಿನ ಚೀಟಿ, ಆಧಾರ್, ಪಾಸ್‌ಪೋರ್ಟ್‌ ಮಾತ್ರವಲ್ಲದೆ, ಅವರ ಊರಿನ ಪೊಲೀಸರಿಂದ ಪ್ರಮಾಣಪತ್ರಗಳನ್ನು ಕೂಡ ಹೊಂದಿರುತ್ತಾರೆ. ಆದರೆ, ಅವುಗಳನ್ನು ಪರಿಗಣಿಸುತ್ತಿಲ್ಲ. ಇಂತಹ ಕಿರುಕುಳ ನಿಲ್ಲಬೇಕು” ಎಂದು ಒತ್ತಾಯಿಸಿದ್ದಾರೆ.

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...