Homeಮುಖಪುಟಅಕ್ರಮ ಬಾಂಗ್ಲಾದೇಶಿ ವಲಸಿಗ ಎಂದು ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ: ಮಾನವ ಹಕ್ಕು ಆಯೋಗದ...

ಅಕ್ರಮ ಬಾಂಗ್ಲಾದೇಶಿ ವಲಸಿಗ ಎಂದು ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ: ಮಾನವ ಹಕ್ಕು ಆಯೋಗದ ಮೊರೆ ಹೋದ ಕುಟುಂಬ

- Advertisement -
- Advertisement -

ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು 30 ವರ್ಷದ ಖಾಸಗಿ ಶಾಲಾ ವ್ಯಾನ್ ಚಾಲಕನನ್ನು ಬೆಂಗಳೂರಿನ ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಅವರನ್ನು ನೆಲಮಂಗಲದ ವಿದೇಶಿಯರ ಬಂಧನ ಕೇಂದ್ರದಲ್ಲಿ ಇರಿಸಿದ್ದಾರೆ. ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಕಾಯುತ್ತಿದ್ದಾರೆ ಎಂದು ದಿ ಹಿಂದೂ ಆಗಸ್ಟ್ 30ರಂದು ವರದಿ ಮಾಡಿದೆ.

ಆದರೆ, ಬಂಧಿತನ ಕುಟುಂಬಸ್ಥರು ಅವರು ಪಶ್ಚಿಮ ಬಂಗಾಳದ ನಿವಾಸಿ ಎಂದು ಹೇಳಿಕೊಂಡಿದ್ದು, ಕಾನೂನುಬಾಹಿರ ಬಂಧನ ಮತ್ತು ಪೊಲೀಸರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಕೆಎಸ್‌ಎಚ್‌ಆರ್‌ಸಿ) ದೂರು ಸಲ್ಲಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ರಫಿಕುಲ್ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ಇವರು ಪಶ್ಚಿಮ ಬಂಗಾಳದ ಧನಂಜಯ್‌ಪುರದವರೆಂದು ಕುಟುಂಬ ಹೇಳಿಕೊಂಡಿದೆ. ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಖಾಸಗಿ ಶಾಲಾ ವ್ಯಾನ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಹೇಳಿದೆ.

ಮಾವನ ಹಕ್ಕುಗಳ ಆಯೋಗಕ್ಕೆ ದೂರು ನೀಡಿರುವ ಬಂಧಿತ ರಫಿಕುಲ್ ಅವರ ಪತ್ನಿ, ರಫಿಕುಲ್ ಅವರ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಜೊತೆಗೆ, ಪಶ್ಚಿಮ ಬಂಗಾಳದ ಧನಂಜಯ್‌ಪುರದ ನಿವಾಸಿ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ ಪ್ರಮಾಣಪತ್ರವನ್ನೂ ನೀಡಿರುವುದಾಗಿ ಹೇಳಿದ್ದಾರೆ.

ಆದರೆ, ಪೊಲೀಸರು ಅವರು ಸಲ್ಲಿಸಿದ ಎಲ್ಲಾ ದಾಖಲೆಗಳನ್ನು ನಕಲಿ ಎಂದು ತಿರಸ್ಕರಿಸಿದ್ದಾಗಿ ತಿಳಿಸಿದ್ದಾರೆ.

ರಫಿಕುಲ್ ಅವರ ವೈದ್ಯಕೀಯ ಮತ್ತು ಸಾರಿಗೆ ವೆಚ್ಚಗಳಿಗಾಗಿ ಪೊಲೀಸರು 10,000 ರೂಪಾಯಿ ಲಂಚ ಕೇಳಿದ್ದಾರೆ ಎಂದೂ ಪತ್ನಿ ಆರೋಪಿಸಿದ್ದು, ಆ ಹಣವನ್ನು ಪಾವತಿಸಿರುವುದಾಗಿ ಹೇಳಿದ್ದಾರೆ.

ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ, ಆಯೋಗವು ಈ ವಿಷಯವನ್ನು ತಕ್ಷಣವೇ ಪರಿಗಣನೆಗೆ ತೆಗೆದುಕೊಂಡು, ಅಕ್ರಮ ಬಂಧನ ಮತ್ತು ಸುಲಿಗೆಯ ಬಗ್ಗೆ ನ್ಯಾಯಯುತ ಹಾಗೂ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಮತ್ತು ಬಂಧಿತ ರಫಿಕುಲ್ ಅವರ ತಕ್ಷಣ ಬಿಡುಗಡೆಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ವರದಿಯ ಆಧಾರದ ಮೇಲೆ ಸಂಶಯಾಸ್ಪದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ತಮ್ಮಲ್ಲಿರುವ ದಾಖಲೆಗಳೊಂದಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಮುಂದೆ ಇದನ್ನು ಪ್ರಶ್ನಿಸಬಹುದು ಎಂದಿದ್ದಾರೆ.

ದಿ ಹಿಂದೂ ಜೊತೆ ಮಾತನಾಡಿರುವ ಬಂಧಿತನ ಕುಟುಂಬದೊಂದಿಗೆ ಕೆಲಸ ಮಾಡುತ್ತಿರುವ ಬೆಂಗಳೂರಿನ ಹೋರಾಟಗಾರ ಆರ್. ಕಲೀಮುಲ್ಲಾ, “ಇತ್ತೀಚೆಗೆ ಪೊಲೀಸರು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಅವರನ್ನು ‘ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು’ ಎಂಬ ಹಣೆಪಟ್ಟಿ ಕಟ್ಟುತ್ತಿದ್ದಾರೆ. ಈ ವಲಸೆ ಕಾರ್ಮಿಕರು ಕೆಲವು ಸಂದರ್ಭಗಳಲ್ಲಿ ಮತದಾರರ ಗುರುತಿನ ಚೀಟಿ, ಆಧಾರ್, ಪಾಸ್‌ಪೋರ್ಟ್‌ ಮಾತ್ರವಲ್ಲದೆ, ಅವರ ಊರಿನ ಪೊಲೀಸರಿಂದ ಪ್ರಮಾಣಪತ್ರಗಳನ್ನು ಕೂಡ ಹೊಂದಿರುತ್ತಾರೆ. ಆದರೆ, ಅವುಗಳನ್ನು ಪರಿಗಣಿಸುತ್ತಿಲ್ಲ. ಇಂತಹ ಕಿರುಕುಳ ನಿಲ್ಲಬೇಕು” ಎಂದು ಒತ್ತಾಯಿಸಿದ್ದಾರೆ.

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...