Homeಮುಖಪುಟವಕೀಲರ ಸೋಗಿನಲ್ಲಿ ಬಂದು ಸಮಾಜವಾದಿ ಪಕ್ಷದ ನಾಯಕನ ಮೇಲೆ ಶೂ ಎಸೆತ

ವಕೀಲರ ಸೋಗಿನಲ್ಲಿ ಬಂದು ಸಮಾಜವಾದಿ ಪಕ್ಷದ ನಾಯಕನ ಮೇಲೆ ಶೂ ಎಸೆತ

- Advertisement -
- Advertisement -

ಸಮಾಜವಾದಿ ಪಕ್ಷದ(ಎಸ್‌ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ಮೇಲೆ  ವಕೀಲನಂತೆ ಬಟ್ಟೆ ಧರಿಸಿಕೊಂಡು ಬಂದ ಅಪರಿಚಿತ ಯುವಕನೋರ್ವ ಶೂ ಎಸೆದಿದ್ದು, ಅಲ್ಲಿದ್ದ ಎಸ್ಪಿ ಕಾರ್ಯಕರ್ತರು ಆತನಿಗೆ ಥಳಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಸಮಾಜವಾದಿ ಪಕ್ಷದ ಒಬಿಸಿ ಸಭೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಸ್ವಾಮಿ ಪ್ರಸಾದ್ ಅವರಿಗೆ ಚಪ್ಪಲಿ ಎಸೆದೆ ಯುವಕನಿಗೆ ಎಸ್ಪಿ ಕಾರ್ಯಕರ್ತರು  ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಶೂ ಎಸೆದ ವ್ಯಕ್ತಿಯನ್ನು ಆಕಾಶ್ ಸೈನಿ ಎಂದು ಗುರುತಿಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಎಸ್ಪಿ ಕಾರ್ಯಕರ್ತರು ಆತನನ್ನು ಥಳಿಸಿದ ವಿಡಿಯೋ ಮತ್ತು ದೃಶ್ಯಗಳು ವೈರಲ್ ಆಗಿದೆ.

ಥಳಿತಕ್ಕೊಳಗಾದ ಯುವಕ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲು ಯತ್ನಿಸುವುದು ವೀಡಿಯೊ ತೋರಿಸಿದೆ. ಆತ ಯಾರು ಮತ್ತು ಏಕೆ ಶೂ ಎಸೆದಿದ್ದಾನೆ ಎಂದು ಪ್ರಶ್ನಿಸಿದಾಗ ಸ್ಪಷ್ಟನೆ ನೀಡಲು ಯತ್ನಿಸಿದನಾದರೂ ಪೊಲೀಸರು ಆತನಿಗೆ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಇತ್ತೀಚೆಗೆ ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಮಚರಿತಮಾನಸ ಕುರಿತು ಹೇಳಿಕೆ ಕೊಟ್ಟು ಸುದ್ದಿಯಾಗಿದ್ದರು.ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ಕ್ರಮಕ್ಕೆ ಸಾಧುಗಳು ಸೇರಿ ಹಲವರು ಒತ್ತಾಯಿಸಿದ್ದರು.

ಉತ್ತರ ಪ್ರದೇಶದಲ್ಲಿ 2022ರ ವಿಧಾನಸಭಾ ಚುನಾವಣೆಗೆ ಮುನ್ನ ಮೌರ್ಯ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಮೌರ್ಯ ಅವರು ಈ ಹಿಂದೆ ಬಿಜೆಪಿಯಲ್ಲಿದ್ದರು.

ಇದನ್ನು ಓದಿ: ಮುಸ್ಲಿಂ ಆಟೋ ಚಾಲಕನಿಗೆ ಕಿರುಕುಳ ನೀಡಿದ್ದ ರೈಲಿನಲ್ಲಿ ನಾಲ್ವರ ಹಂತಕ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...