Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

- Advertisement -
- Advertisement -

ಮಧ್ಯಪ್ರದೇಶದ ಗುನಾ ಜಿಲ್ಲೆಯಿಂದ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಅಪಹರಿಸಿ ರಾಜಸ್ಥಾನಕ್ಕೆ ಕರೆದೊಯ್ದು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಮಹಿಳೆಯರ ಉಡುಪಿನಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಸಂತ್ರಸ್ತನ ಕುಟುಂಬಸ್ಥರನ್ನು ಒಳಗೊಂಡ ಗುಂಪು ಈ ಕೃತ್ಯವನ್ನು ನಡೆಸಿದೆ. ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ, ಪಾದರಕ್ಷೆಗಳ ಮಾಲೆಯನ್ನು ತೊಡುವಂತೆ ಬಲವಂತ ಮಾಡಲಾಗಿದೆ. ಮಹೇಂದ್ರ ಸಿಂಗ್ ಎಂಬ ಸಂತ್ರಸ್ತ ಆರಂಭದಲ್ಲಿ ತನ್ನ ದೂರನ್ನು ದಾಖಲಿಸಲಿಲ್ಲ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಯ ಗಮನಕ್ಕೆ ತಂದ ನಂತರ ಫತೇಘರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸಿನ್ಹಾ, ಈ ಘಟನೆಯು ಮೇ 22ರಂದು ನಡೆದಿದ್ದು, ರಾಜಸ್ಥಾನದಲ್ಲಿ ಹಲ್ಲೆ ನಡೆದಿದ್ದರೂ, ಈ ಬಗ್ಗೆ ಸೋಮವಾರ ತಡರಾತ್ರಿ ಗುಣಾದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಏಕೆಂದರೆ ಅಲ್ಲಿಂದ ಅವರನ್ನು ಅಪಹರಿಸಲಾಗಿದೆ ಎಂದು ತಿಳಿಸಿದ್ದಾರೆ.

ದೂರಿನ ಪ್ರಕಾರ ಆರೋಪಿಗಳು ಚಿತ್ರಹಿಂಸೆಯ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೆ ಸಂತ್ರಸ್ತನನ್ನು ರಾಜಸ್ಥಾನದ ವಿವಿಧ ಸ್ಥಳಗಳಿಗೆ ಕರೆದೊಯ್ಯಲಾಗಿತ್ತು. ಆತನನ್ನು ಬಿಡುಗಡೆ ಮಾಡಲು ಅಪಹರಣಕಾರರು ಆತನ ತಂದೆ ಫೂಲ್ ಸಿಂಗ್ ಅವರಿಂದ 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಫೂಲ್ ಸಿಂಗ್ ಪೊಲೀಸರನ್ನು ಸಂಪರ್ಕಿಸಿದಾಗ, ಅವರು ಕ್ರಮ ಕೈಗೊಳ್ಳುವ ಬದಲು ಹಣ ನೀಡುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬ ಹೈಕೋರ್ಟ್ ಮೊರೆ ಹೋಗಲು ಮುಂದಾಗಿದೆ.

ಆರೋಪಿಗಳಾದ ಸೌದನ್ ಸಿಂಗ್, ಗುಮಾನ್ ಸಿಂಗ್ ಮತ್ತು ಓಂಕಾರ್ ಸೇರಿಂದತೆ 10-12 ಮಂದಿಯಿದ್ದ ಗುಂಪು ನನ್ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಅವರು ನನ್ನ ತಲೆಯನ್ನು ಬೋಳಿಸಿ, ಮೂತ್ರ ಕುಡಿಯುವಂತೆ ಬಲವಂತ ಮಾಡಿದರು, ಪಾದರಕ್ಷೆಯಿಂದ ಮಾಡಿದ ಮಾಲೆಯನ್ನು ಧರಿಸುವಂತೆ ಮಾಡಿದರು ಮತ್ತು ನನ್ನ ಮುಖಕ್ಕೆ ಕಪ್ಪು ಬಣ್ಣವನ್ನು ಬಳಿದಿದ್ದಾರೆ. ಬಳಿಕ ಅವರು ನನ್ನನ್ನು ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ನಂತರ ನನ್ನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಹೊರತು ನನಗೆ ಬೇರೆ ದಾರಿ ಕಾಣಿಸುತ್ತಿಲ್ಲ ಎಂದು ದೂರುದಾರ ಹೇಳಿದ್ದಾರೆ.

ವ್ಯಕ್ತಿಯನ್ನು ಜೀಪಿನಲ್ಲಿ ಅಪಹರಿಸಿ, ಥಳಿಸಿ, ಚಪ್ಪಲಿ ಹಾರವನ್ನು ಹಾಕಿ, ಮಹಿಳೆಯ ಬಟ್ಟೆಗಳನ್ನು ಧರಿಸುವಂತೆ ಮಾಡಿದರು ಮತ್ತು ಮೂತ್ರ ಕುಡಿಸುವಂತೆ ಒತ್ತಾಯಿಸಿದರು. ಆರೋಪಿಗಳು ಮೂರು ದಿನಗಳಲ್ಲಿ 20 ಲಕ್ಷ ರೂ.ಗಳನ್ನು ಪಾವತಿಸುವ ಷರತ್ತಿನ ಮೇಲೆ ಕೊನೆಗೆ ವ್ಯಕ್ತಿಯನ್ನು ಬಿಡುಗಡೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಆರೋಪಿಗಳ ವಿರುದ್ಧ 506 (ಕ್ರಿಮಿನಲ್ ಬೆದರಿಕೆ), 365 (ಅಪಹರಣ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...