Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

- Advertisement -
- Advertisement -

ಮಧ್ಯಪ್ರದೇಶದ ಗುನಾ ಜಿಲ್ಲೆಯಿಂದ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಅಪಹರಿಸಿ ರಾಜಸ್ಥಾನಕ್ಕೆ ಕರೆದೊಯ್ದು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಮಹಿಳೆಯರ ಉಡುಪಿನಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಸಂತ್ರಸ್ತನ ಕುಟುಂಬಸ್ಥರನ್ನು ಒಳಗೊಂಡ ಗುಂಪು ಈ ಕೃತ್ಯವನ್ನು ನಡೆಸಿದೆ. ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ, ಪಾದರಕ್ಷೆಗಳ ಮಾಲೆಯನ್ನು ತೊಡುವಂತೆ ಬಲವಂತ ಮಾಡಲಾಗಿದೆ. ಮಹೇಂದ್ರ ಸಿಂಗ್ ಎಂಬ ಸಂತ್ರಸ್ತ ಆರಂಭದಲ್ಲಿ ತನ್ನ ದೂರನ್ನು ದಾಖಲಿಸಲಿಲ್ಲ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಯ ಗಮನಕ್ಕೆ ತಂದ ನಂತರ ಫತೇಘರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸಿನ್ಹಾ, ಈ ಘಟನೆಯು ಮೇ 22ರಂದು ನಡೆದಿದ್ದು, ರಾಜಸ್ಥಾನದಲ್ಲಿ ಹಲ್ಲೆ ನಡೆದಿದ್ದರೂ, ಈ ಬಗ್ಗೆ ಸೋಮವಾರ ತಡರಾತ್ರಿ ಗುಣಾದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಏಕೆಂದರೆ ಅಲ್ಲಿಂದ ಅವರನ್ನು ಅಪಹರಿಸಲಾಗಿದೆ ಎಂದು ತಿಳಿಸಿದ್ದಾರೆ.

ದೂರಿನ ಪ್ರಕಾರ ಆರೋಪಿಗಳು ಚಿತ್ರಹಿಂಸೆಯ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೆ ಸಂತ್ರಸ್ತನನ್ನು ರಾಜಸ್ಥಾನದ ವಿವಿಧ ಸ್ಥಳಗಳಿಗೆ ಕರೆದೊಯ್ಯಲಾಗಿತ್ತು. ಆತನನ್ನು ಬಿಡುಗಡೆ ಮಾಡಲು ಅಪಹರಣಕಾರರು ಆತನ ತಂದೆ ಫೂಲ್ ಸಿಂಗ್ ಅವರಿಂದ 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಫೂಲ್ ಸಿಂಗ್ ಪೊಲೀಸರನ್ನು ಸಂಪರ್ಕಿಸಿದಾಗ, ಅವರು ಕ್ರಮ ಕೈಗೊಳ್ಳುವ ಬದಲು ಹಣ ನೀಡುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬ ಹೈಕೋರ್ಟ್ ಮೊರೆ ಹೋಗಲು ಮುಂದಾಗಿದೆ.

ಆರೋಪಿಗಳಾದ ಸೌದನ್ ಸಿಂಗ್, ಗುಮಾನ್ ಸಿಂಗ್ ಮತ್ತು ಓಂಕಾರ್ ಸೇರಿಂದತೆ 10-12 ಮಂದಿಯಿದ್ದ ಗುಂಪು ನನ್ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಅವರು ನನ್ನ ತಲೆಯನ್ನು ಬೋಳಿಸಿ, ಮೂತ್ರ ಕುಡಿಯುವಂತೆ ಬಲವಂತ ಮಾಡಿದರು, ಪಾದರಕ್ಷೆಯಿಂದ ಮಾಡಿದ ಮಾಲೆಯನ್ನು ಧರಿಸುವಂತೆ ಮಾಡಿದರು ಮತ್ತು ನನ್ನ ಮುಖಕ್ಕೆ ಕಪ್ಪು ಬಣ್ಣವನ್ನು ಬಳಿದಿದ್ದಾರೆ. ಬಳಿಕ ಅವರು ನನ್ನನ್ನು ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ನಂತರ ನನ್ನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಹೊರತು ನನಗೆ ಬೇರೆ ದಾರಿ ಕಾಣಿಸುತ್ತಿಲ್ಲ ಎಂದು ದೂರುದಾರ ಹೇಳಿದ್ದಾರೆ.

ವ್ಯಕ್ತಿಯನ್ನು ಜೀಪಿನಲ್ಲಿ ಅಪಹರಿಸಿ, ಥಳಿಸಿ, ಚಪ್ಪಲಿ ಹಾರವನ್ನು ಹಾಕಿ, ಮಹಿಳೆಯ ಬಟ್ಟೆಗಳನ್ನು ಧರಿಸುವಂತೆ ಮಾಡಿದರು ಮತ್ತು ಮೂತ್ರ ಕುಡಿಸುವಂತೆ ಒತ್ತಾಯಿಸಿದರು. ಆರೋಪಿಗಳು ಮೂರು ದಿನಗಳಲ್ಲಿ 20 ಲಕ್ಷ ರೂ.ಗಳನ್ನು ಪಾವತಿಸುವ ಷರತ್ತಿನ ಮೇಲೆ ಕೊನೆಗೆ ವ್ಯಕ್ತಿಯನ್ನು ಬಿಡುಗಡೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಆರೋಪಿಗಳ ವಿರುದ್ಧ 506 (ಕ್ರಿಮಿನಲ್ ಬೆದರಿಕೆ), 365 (ಅಪಹರಣ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...