Homeಮುಖಪುಟಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

- Advertisement -
- Advertisement -

ಓರಿಸ್ಸಾದ ಕೇಂದ್ರಪರ ಊರಿನಲ್ಲಿ ಮೊಸಳೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 52 ವರ್ಷದ ವರ್ಷದ ವ್ಯಕ್ತಿ ಸ್ನಾನಕ್ಕೆಂದು ಜಗನ್ನಾಥಪುರ ಗ್ರಾಮದ ಬ್ರಹ್ಮಾಣಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೇಂದ್ರಪರ ಸಮೀಪದ ಹಳ್ಳಿಗಳಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳಲ್ಲಿ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ.

ಸೋಮವಾರ ಮಧ್ಯಾಹ್ನ 1:30 ಗಂಟೆ ಹೊತ್ತಿನಲ್ಲಿ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ ಅವರನ್ನು ನದಿಯ ಆಳಕ್ಕೆ ಎಳೆದುಕೊಂಡು ಹೋಗಿದೆ. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಗ್ರಾಮಸ್ಥರು ಜೋರಾಗಿ ಕಿರುಚಿಕೊಂಡಿದ್ದಾರೆ. ವ್ಯಕ್ತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಆ ಹೊತ್ತಿಗಾಗಲೇ ಮೊಸಳೆ ವ್ಯಕ್ತಿಯನ್ನು ಕೊಂದಾಗಿತ್ತು. ಪುರುಷೋತ್ತಮ್ ಅವರ ಮೃತದೇಹಕ್ಕಾಗಿ ಗ್ರಾಮಸ್ಥರು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದುವರೆಗೆ ದೇಹ ಪತ್ತೆಯಾಗಿಲ್ಲ.

ಇದಕ್ಕು ಮೊದಲು ಜೂನ್ 13ರ ಭಾನುವಾರ ಅರ್ಧ ತಿಂದ ಮಹಿಳೆಯ ದೇಹ ಸಮೀಪದ ವೆಕ್ಟಾ ಹಳ್ಳಿಯಲ್ಲಿ ಪತ್ತೆಯಾಗಿತ್ತು. ಉಪ್ಪುನೀರಿನ ಮೊಸಳೆಯೊಂದು ಮಹಿಳೆಯನ್ನು ನದಿಗೆ ಎಳೆದೊಯ್ದು ಕೊಂದುಹಾಕಿತ್ತು. ಈ ಎರಡು ಘಟನೆಗಳು ಬಿಥರ್‌ಕನಿಕಾ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ನಡೆದಿವೆ. ಹೆಚ್ಚುತ್ತಿರುವ ಮೊಸಳೆ ದಾಳಿಯಿಂದ ನದಿ ದಂಡೆಯ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಬಿಥರ್‌ಕನಿಕಾ ರಾಷ್ಟ್ರೀಯ ಉದ್ಯಾನವನವು ಸರಿ ಸುಮಾರು 1,768 ಉಪ್ಪುನೀರಿನ ಮೊಸಳೆಗಳಿಗೆ ಆಶ್ರಯತಾಣವಾಗಿದೆ. ಅದರಲ್ಲಿ ಕೆಲವು ಮೊಸಳೆಗಳು ದಾರಿತಪ್ಪಿ ರಾಷ್ಟ್ರೀಯ ಉದ್ಯಾನದ ಆಚೆಯ ನದಿ ದಂಡೆಯ ಗ್ರಾಮಗಳತ್ತ ಹೋಗಿವೆ. ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ನದಿ ದಂಡೆಗಳಿಗೆ ಪ್ರವೇಶಿಸದಂತೆ ಗ್ರಾಮಸ್ಥರಿಗೆ ಸೂಚನೆಯನ್ನು ನೀಡಿದ್ದೇವೆ. ಅಪಾಯಕಾರಿ ಮೊಸಳೆಗಳು ಇರುವುದನ್ನು ಲೆಕ್ಕಿಸದೇ ಗ್ರಾಮಸ್ಥರು ನದಿಗಳಿಗೆ ಹೋಗುತ್ತಿದ್ದಾರೆ. ಇದರಿಂದ ಹೆಚ್ಚು ಮಾನವ ಮತ್ತು ಮೊಸಳೆಗಳ ನಡುವೆ ಸಂಘರ್ಷ ನಡೆಯುತ್ತಿದೆ. ಅನೇಕ ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗುತ್ತಿದ್ದಾರೆ ಎಂದು ಡಿವಿಜನಲ್ ಫಾರೆಸ್ಟ್‌ ಆಫಿಸರ್ ಬಿಕಾಶ್ ರಂಜನ್ ದಾಶ್ ತಿಳಿಸಿದ್ದಾರೆ.

ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನದಿ ತೀರದಲ್ಲಿ ಸಾಕಷ್ಟು ಬ್ಯಾರಕೇಡ್‌ಗಳನ್ನು ಅಳವಡಿಸಿ ಮೊಸಳೆಗಳು ಜನವಸತಿ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯುವ ಕೆಲಸವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸುತ್ತಿದ್ದಾರೆ ಎಂದು DFO ಬಿಕಾಶ್ ರಂಜನ್ ದಾಶ್ ತಿಳಿಸಿದ್ದಾರೆ.


ಇದನ್ನೂ ಓದಿ : ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...