Homeಮುಖಪುಟಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

- Advertisement -
- Advertisement -

ಓರಿಸ್ಸಾದ ಕೇಂದ್ರಪರ ಊರಿನಲ್ಲಿ ಮೊಸಳೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 52 ವರ್ಷದ ವರ್ಷದ ವ್ಯಕ್ತಿ ಸ್ನಾನಕ್ಕೆಂದು ಜಗನ್ನಾಥಪುರ ಗ್ರಾಮದ ಬ್ರಹ್ಮಾಣಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೇಂದ್ರಪರ ಸಮೀಪದ ಹಳ್ಳಿಗಳಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳಲ್ಲಿ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ.

ಸೋಮವಾರ ಮಧ್ಯಾಹ್ನ 1:30 ಗಂಟೆ ಹೊತ್ತಿನಲ್ಲಿ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ ಅವರನ್ನು ನದಿಯ ಆಳಕ್ಕೆ ಎಳೆದುಕೊಂಡು ಹೋಗಿದೆ. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಗ್ರಾಮಸ್ಥರು ಜೋರಾಗಿ ಕಿರುಚಿಕೊಂಡಿದ್ದಾರೆ. ವ್ಯಕ್ತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಆ ಹೊತ್ತಿಗಾಗಲೇ ಮೊಸಳೆ ವ್ಯಕ್ತಿಯನ್ನು ಕೊಂದಾಗಿತ್ತು. ಪುರುಷೋತ್ತಮ್ ಅವರ ಮೃತದೇಹಕ್ಕಾಗಿ ಗ್ರಾಮಸ್ಥರು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದುವರೆಗೆ ದೇಹ ಪತ್ತೆಯಾಗಿಲ್ಲ.

ಇದಕ್ಕು ಮೊದಲು ಜೂನ್ 13ರ ಭಾನುವಾರ ಅರ್ಧ ತಿಂದ ಮಹಿಳೆಯ ದೇಹ ಸಮೀಪದ ವೆಕ್ಟಾ ಹಳ್ಳಿಯಲ್ಲಿ ಪತ್ತೆಯಾಗಿತ್ತು. ಉಪ್ಪುನೀರಿನ ಮೊಸಳೆಯೊಂದು ಮಹಿಳೆಯನ್ನು ನದಿಗೆ ಎಳೆದೊಯ್ದು ಕೊಂದುಹಾಕಿತ್ತು. ಈ ಎರಡು ಘಟನೆಗಳು ಬಿಥರ್‌ಕನಿಕಾ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ನಡೆದಿವೆ. ಹೆಚ್ಚುತ್ತಿರುವ ಮೊಸಳೆ ದಾಳಿಯಿಂದ ನದಿ ದಂಡೆಯ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಬಿಥರ್‌ಕನಿಕಾ ರಾಷ್ಟ್ರೀಯ ಉದ್ಯಾನವನವು ಸರಿ ಸುಮಾರು 1,768 ಉಪ್ಪುನೀರಿನ ಮೊಸಳೆಗಳಿಗೆ ಆಶ್ರಯತಾಣವಾಗಿದೆ. ಅದರಲ್ಲಿ ಕೆಲವು ಮೊಸಳೆಗಳು ದಾರಿತಪ್ಪಿ ರಾಷ್ಟ್ರೀಯ ಉದ್ಯಾನದ ಆಚೆಯ ನದಿ ದಂಡೆಯ ಗ್ರಾಮಗಳತ್ತ ಹೋಗಿವೆ. ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ನದಿ ದಂಡೆಗಳಿಗೆ ಪ್ರವೇಶಿಸದಂತೆ ಗ್ರಾಮಸ್ಥರಿಗೆ ಸೂಚನೆಯನ್ನು ನೀಡಿದ್ದೇವೆ. ಅಪಾಯಕಾರಿ ಮೊಸಳೆಗಳು ಇರುವುದನ್ನು ಲೆಕ್ಕಿಸದೇ ಗ್ರಾಮಸ್ಥರು ನದಿಗಳಿಗೆ ಹೋಗುತ್ತಿದ್ದಾರೆ. ಇದರಿಂದ ಹೆಚ್ಚು ಮಾನವ ಮತ್ತು ಮೊಸಳೆಗಳ ನಡುವೆ ಸಂಘರ್ಷ ನಡೆಯುತ್ತಿದೆ. ಅನೇಕ ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗುತ್ತಿದ್ದಾರೆ ಎಂದು ಡಿವಿಜನಲ್ ಫಾರೆಸ್ಟ್‌ ಆಫಿಸರ್ ಬಿಕಾಶ್ ರಂಜನ್ ದಾಶ್ ತಿಳಿಸಿದ್ದಾರೆ.

ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನದಿ ತೀರದಲ್ಲಿ ಸಾಕಷ್ಟು ಬ್ಯಾರಕೇಡ್‌ಗಳನ್ನು ಅಳವಡಿಸಿ ಮೊಸಳೆಗಳು ಜನವಸತಿ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯುವ ಕೆಲಸವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸುತ್ತಿದ್ದಾರೆ ಎಂದು DFO ಬಿಕಾಶ್ ರಂಜನ್ ದಾಶ್ ತಿಳಿಸಿದ್ದಾರೆ.


ಇದನ್ನೂ ಓದಿ : ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...