Homeಅಂಕಣಗಳುಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

ಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

- Advertisement -
- Advertisement -

ಕನ್ನಡದ ಸಾಂಸ್ಕೃತಿಕ ಲೋಕದೊಳಕ್ಕೆ ನುಗ್ಗಿರುವ ಪುರೋಹಿತಶಾಹಿಗಳ ಸುಳ್ಳುಗಳು ವಿಜೃಂಭಿಸತೊಡಗಿದೆಯಲ್ಲಾ. ಈ ಪೈಕಿ ಕುವೆಂಪು ಸಾಹಿತ್ಯವನ್ನು ’ತಿದ್ದಲು’ ಹೋಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿ ಸಿಕ್ಕಿಬಿದ್ದರಲ್ಲಾ. ಕುವೆಂಪು ನಡೆದಾಡಿದ ಪ್ರದೇಶಕ್ಕೆ ಬಂದು ಕುವೆಂಪು ಚಾತುವರ್ಣದ ವಿರೋಧಿಯಾಗಿರಲಿಲ್ಲ ಎಂದಿದ್ದಾರಲ್ಲ. ಸದರಿ ಹೇಳಿಕೆಗೆ ಅಂತಹಾ ಪ್ರತಿಭಟನೆ ಕಂಡುಬಂದಿಲ್ಲ. ಏಕೆಂದರೆ ಒಬ್ಬ ವ್ಯಕ್ತಿ ಸುಳ್ಳನ್ನೇ ಹೇಳುತ್ತ ಜೀವಿಸುವುದಾದರೆ ನಮ್ಮ ಜನ ತಾತ್ಸಾರ ಮಾಡುತ್ತಾರೆ. ಹಾಗೆಯೇ ನಾಡಿನ ಪ್ರಜ್ಞಾವಂತರ ತಾತ್ಸಾರಕ್ಕೆ ಗುರಿಯಾಗಿರುವ ಚಕ್ರತೀರ್ಥ ಕುವೆಂಪುರವರನ್ನು, ಪಟ್ಟಾಗಿ ಕುಳಿತು ಓದಿದ್ದಾದರೆ ಅಲ್ಲಿ ಚಾತುರ್ವಣಕ್ಕೆ ಚಾಟೀ ಬೀಸಿರುವ ಮಾತುಗಳು ಯಥೇಚ್ಛವಾಗಿ ಸಿಗುತ್ತವೆ. ಭಾರತದ ಸಮಾಜವನ್ನು ಛಿದ್ರವಿಚ್ಛಿದ್ರಗೈದ ಮತ್ತು ಇಂದಿನ ಭರತಖಂಡದ ಸಮಸ್ಯೆಗಳಿಗೆ ಮೂಲ ಕಾರಣವಾದ ಮನುಧರ್ಮ ಶಾಸ್ತ್ರವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಸುಟ್ಟಿದ್ದರಲ್ಲಿ ದೊಡ್ಡ ಸಂದೇಶವಿದೆ. ಅದರ ಹೇಳಹೆಸರುಳಿಯದಂತೆ ಸುಟ್ಟು, ಬೂದಿಯನ್ನ ಅರಬ್ಬೀ ಸಮುದ್ರಕ್ಕೆರಚಿದಾಗ ಮಾತ್ರ ದೇಶ ಹಾಗೂ ಅಮಾಯಕ ಜನ ಅನಿಷ್ಠದ ಧರ್ಮಶೃಂಖಲೆಗಳಿಂದ ಪಾರಾಗುತ್ತಾರೆ. “ಶಾಸ್ತ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ತರ್ಕವೆಂಬುದು ತಗರ ಹೋರಟೆ” ಎಂದು ಅಲ್ಲಮಪ್ರಭುಗಳು ಹೇಳಿದ್ದಾರಲ್ಲ. ಹಾಗೆಯೇ, “ಶಾಸ್ತ್ರಕ್ಕೆ ನಿಗಳನಿಕ್ಕುವೆ, ತರ್ಕದ ಬೆನ್ನ ಭಾರನೆತ್ತುವೆ, ಆಗಮದ ಮೂಗ ಕುಯ್ಯುವೆ” ಎಂಬ ಬಸವಣ್ಣನ ಮಾತನ್ನ ದಾಖಲಿಸಿರುವ ಕುವೆಂಪು ಅದಾವ ಮಾನದಂಡದಿಂದ ಚಾತುರ್ವರ್ಣ ಒಪ್ಪಿದ್ದರೆಂಬುದನ್ನ ಚಕ್ರತೀರ್ಥರೇ ತೋರಿಸಬೇಕಾಗಿದೆಯಲ್ಲಾ ಥೂತ್ತೇರಿ.

******

ಇತ್ತ ಸಾಹಿತ್ಯ ಪರಿಷತ್ತಿಗೆ ವಕ್ಕರಿಸಿರುವ ಜೋಶಿ ಎಂಬಾತನ ಸುಳ್ಳಿಗೆ ಇಡೀ ನಾಡೇ ಬೆಚ್ಚಿ ಬಿದ್ದಿದೆಯಲ್ಲಾ. ಶಿಶುನಾಳ ಶರೀಫರು ತಮ್ಮ ಆಧ್ಯಾತ್ಮದ ಗುರುವಾದ ಗೋವಿಂದ ಭಟ್ಟರನ್ನ ವಜ್ರದ ಹರಳೆಂದು ಕರೆದಿದ್ದಾರೆ. ಶಿಶುನಾಳ ಶರೀಫ ಈ ನಾಡುಕಂಡ ಮಹಾನ್ ಕವಿ. ಈ ಕವಿಯನ್ನ ಶೋಧಿಸಿ ನಾಡ ಗಾಯಕರೆಲ್ಲಾ ಹಾಡಿದ್ದಾರೆ. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಈ ಚೇತನಗಳು ಕನ್ನಡದ ನೆಲದಲ್ಲಿ ಅಜರಾಮರವಾಗಿವೆ. ಶರೀಫರ ಕುಲಬಾಂಧವರಾರೂ ಅವರ ಸಂಬಂಧಿಗಳೆಂದು ಈವರೆಗೆ ಹೇಳಿಕೊಂಡಿಲ್ಲ. ಆದರೆ ಸಂಸಾರವೇ ಇಲ್ಲದೆ ಕಾಲವಾದ ಗೋವಿಂದ ಭಟ್ಟರ ವಂಶದ ಕುಡಿಯೊಂದು ಪ್ರತಿ ಮೂರು ಮಾತಿನ ನಡುವೆ ನಾನು ಗೋವಿಂದ ಭಟ್ಟರ ಮರಿಮೊಮ್ಮಮಗನೆಂದು ಹೇಳುತ್ತದೆಲ್ಲಾ. ಏನಾದರೂ ಪ್ರತಿಪಾದಿಸಿಕೊಂಡು ಹಾಳಾಗಿ ಹೋಗಲಿ ಎಂದರೆ, ಕನ್ನಡ ಸಾಂಸ್ಕೃತಿಕ ಲೋಕದ ಜಾತ್ಯತೀತ ವೇದಿಕೆಯಾದ ಸಾಹಿತ್ಯ ಪರಿಷತ್‌ಗೆ ಜನಿವಾರ ತೊಡಿಸುತ್ತಾ, ಸರಿಪಡಿಸಲಾಗದ ಅವಾಂತರ ಸೃಷ್ಟಿಸತೊಡಗಿದ್ದಾರೆ. ಒಂದು ವೇಳೆ ಈತ ಅಕಸ್ಮಾತ್ ಗೋವಿಂದ ಭಟ್ಟರ ಮರಿಮೊಮ್ಮಗನೇ ಆಗಿದ್ದರೆ ಕನ್ನಡದ ಪ್ರಗತಿಪರ ಚಿಂತಕರನ್ನು ಮನೋರೋಗದಿಂದ ಬಳಲುತ್ತಿರುವ ಜನ ಎಂದು ಸಂಬೋಧಿಸುತ್ತಿರಲಿಲ್ಲವಲ್ಲವೇ? ಥೂತ್ತೇರಿ.

*******

ಗುಜರಾತಿನ ಅಮಿತ್ ಶಾ ಎಂಬ ಅಮುಲ್ ಗಿರಾಕಿ ಮಂಡ್ಯಕ್ಕೆ ಬಂದುದ್ದೂ ಅಲ್ಲದೆ, ಕರ್ನಾಟಕದ ನಂದಿನಿಯನ್ನು ಅಮುಲ್ ಜೊತೆಗೆ ಸೇರಿಸಬೇಕು ಎಂದು ಬಿಟ್ಟಿದ್ದಾರಂತಲ್ಲಾ. ಶಾ ಅವರ ಇಂತಹ ಹೇಳಿಕೆಗೆ ಮಂಡ್ಯದ ಆ ಸಭೆಯಲ್ಲಿ ಯಾವ ಪ್ರತಿರೋಧವೂ ಬರಲಿಲ್ಲ. ಕಾರಣ ಅಲ್ಲಿ ಚಪ್ಪಾಳೆಗಾಗಿ ಕರೆದುಕೊಂಡು ಬಂದವರಿಗೆ ಶಾ ಹೇಳುವುದೇನು ಎಂಬುದೇ ತಿಳಿಯಲಿಲ್ಲ. ತಿಳಿದರೂ ಅವರ ಮಾತನ್ನು ಕೇಳುವವರು ಯಾರಿದ್ದರು ಅಲ್ಲಿ? ಆದರೆ ತಿಳಿದುಕೊಳ್ಳಬೇಕಾದವರು ತಮ್ಮ ರಾಸುಗಳ ಜೊತೆಗಿದ್ದರು. ರಾಸುಗಳ ಮೈ ತೊಳೆಯುವುದು, ಹಾಲು ಕರೆಯುವುದು, ಹುಲ್ಲು ಹಾಕುವುದು ಇತ್ಯಾದಿ ನಿರಂತರ ಕೆಲಸಗಳ ನಡುವೆ, ಇಂತಹ ಚಪ್ಪಾಳೆ ಸಂಸ್ಕೃತಿಗೆ ಹೊರತಾದ ಜನ ಅವರು. ಅಮುಲ್ ಹಾಲಿನೊಳಕ್ಕೆ ನಂದಿನಿ ಮಿಕ್ಸ್ ಮಾಡಿ ಕಡೆಗೆ ಅಮುಲ್ ಮಾತ್ರ ಬಳಸಿಕೊಂಡು ನಂದಿನಿಗೆ ತಿಲಾಂಜಲಿ ಇಡುವ ಹಿಕಮತ್ತಿನ ಭಾಷಣ ಅವರಿಗೆ ತಲುಪಲೇಯಿಲ್ಲ. ತಲುಪಿದ್ದೇ ಆದರೆ ಶಾ ಕಡೆಯವರು ಮಂಡ್ಯದ ಕಡೆ ಮುಖಹಾಕುವುದು ಕಷ್ಟವೆಂದರಿತು, ಶಾ ಹಾಗೆ ಹೇಳಿಲ್ಲ, ಅಮುಲ್ ಹಾಲಿನ ಹಂಡೆಗಳು ಮಂಡ್ಯಕ್ಕೆ ಬರುತ್ತವೆ, ಮಂಡ್ಯದ ಹಳೆ ಹಾಲಿನ ಕ್ಯಾನ್‌ಗಳು ಗುಜರಾತಿನ ಗುಜರಿ ಸೇರಿ ಹೊಸ ಕ್ಯಾನ್ ಬರುತ್ತವೆ ಎಂದು ಮುಖ್ಯಮಂತ್ರಿಯಿಂದ ಹಿಡಿದು ಕೂಗುಮಾರಿ ಸಿ.ಟಿ ರವಿವರೆಗೆ ಕರ್ನಾಟಕದ ಬಿಜೆಪಿಗಳು ಕೂಗುತ್ತಿವೆಯಲ್ಲಾ. ಮಂಡ್ಯದ ನೆಲ ಹುಟ್ಟಿಸಿದ ಭಯಕ್ಕೆ ಇನ್ನೇನು ಬೇಕು, ಥೂತ್ತೇರಿ.

******

ಮೈಸೂರು ರಂಗಾಯಣದ ಪ್ರದೇಶಕ್ಕೆ ಬಂದು ಸೇರಿಕೊಂಡಿರುವ ಅಡ್ನಾಡಿಗಳ ಅವಾಂತರಕ್ಕೆ ಹೇಸಿದ ಪ್ರಜ್ಞಾವಂತರಾರೂ ಆ ಕಡೆ ಸುಳಿಯದಿರುವುದು ಹಳೆಯ ಸುದ್ದಿ. ಈಗಾಗಲೇ ಟಿಪ್ಪು ಜೀವನವನ್ನ ವಿಕೃತಗೊಳಿಸಿ ನಾಟಕ ರಚಿಸಿ ಬೈಸಿಕೊಂಡವರ ಪೈಕಿ ಒಬ್ಬರು, ಚಂದ್ರಶೇಖರ ಕಂಬಾರರ ಸಾಂಭಶಿವ ಪ್ರಹಸನಕ್ಕೂ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರ ಕಾರ್ಯವೈಖರಿಗೂ ಸಂಬಂಧವೇ ಇಲ್ಲದಿದ್ದರೂ, ಅನ್ನಭಾಗ್ಯವನ್ನ ಆಡಿಕೊಂಡಿದ್ದಾರಂತಲ್ಲಾ. ವಾಸ್ತವವಾಗಿ ಈ ನಾಟಕ ನಿರ್ದೇಶಕನಿಗೆ ಬಂದ ಧೈರ್ಯದ ಪ್ರೇರಣೆಯಾವುದೆಂದರೆ ಟಿಪ್ಪುವಿನ ಚರಿತ್ರೆಯನ್ನು ವಿಕೃತವಾಗಿ ತಿರುಚಿ ಆಡಿಸಿದ ನಾಟಕವೇ. ಇಂತಹವರ ವಿಕೃತಿಗೆ ಅಂತ್ಯ ಅಡುವುದು ಮೈಸೂರಿನ ಪ್ರಜ್ಞಾವಂತರ ಕೆಲಸ. ಈ ದೇಶವೇ ಕೊಂಡಾಡಿದ ಮೈಸೂರಿನ ಮಹಾರಾಜರ ಕರ್ಮ ಭೂಮಿಯಲ್ಲಿ, ಅದರಲ್ಲೂ ರಂಗಾಯಣದ ಆವರಣದಲ್ಲಿ, ಇತಿಹಾಸವನ್ನೇ ತಿರುಚುವ ವಿಕೃತಿಗಳು, ಕಲೆ ಸಾಹಿತ್ಯ ಸಂಗೀತವನ್ನೇ ಹಾಳುಮಾಡುವ ಕ್ರಿಮಿ ಕೀಟಗಳು ಇರಬಾರದಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...