Homeಅಂಕಣಗಳುಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

ಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

- Advertisement -
- Advertisement -

ಕನ್ನಡದ ಸಾಂಸ್ಕೃತಿಕ ಲೋಕದೊಳಕ್ಕೆ ನುಗ್ಗಿರುವ ಪುರೋಹಿತಶಾಹಿಗಳ ಸುಳ್ಳುಗಳು ವಿಜೃಂಭಿಸತೊಡಗಿದೆಯಲ್ಲಾ. ಈ ಪೈಕಿ ಕುವೆಂಪು ಸಾಹಿತ್ಯವನ್ನು ’ತಿದ್ದಲು’ ಹೋಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿ ಸಿಕ್ಕಿಬಿದ್ದರಲ್ಲಾ. ಕುವೆಂಪು ನಡೆದಾಡಿದ ಪ್ರದೇಶಕ್ಕೆ ಬಂದು ಕುವೆಂಪು ಚಾತುವರ್ಣದ ವಿರೋಧಿಯಾಗಿರಲಿಲ್ಲ ಎಂದಿದ್ದಾರಲ್ಲ. ಸದರಿ ಹೇಳಿಕೆಗೆ ಅಂತಹಾ ಪ್ರತಿಭಟನೆ ಕಂಡುಬಂದಿಲ್ಲ. ಏಕೆಂದರೆ ಒಬ್ಬ ವ್ಯಕ್ತಿ ಸುಳ್ಳನ್ನೇ ಹೇಳುತ್ತ ಜೀವಿಸುವುದಾದರೆ ನಮ್ಮ ಜನ ತಾತ್ಸಾರ ಮಾಡುತ್ತಾರೆ. ಹಾಗೆಯೇ ನಾಡಿನ ಪ್ರಜ್ಞಾವಂತರ ತಾತ್ಸಾರಕ್ಕೆ ಗುರಿಯಾಗಿರುವ ಚಕ್ರತೀರ್ಥ ಕುವೆಂಪುರವರನ್ನು, ಪಟ್ಟಾಗಿ ಕುಳಿತು ಓದಿದ್ದಾದರೆ ಅಲ್ಲಿ ಚಾತುರ್ವಣಕ್ಕೆ ಚಾಟೀ ಬೀಸಿರುವ ಮಾತುಗಳು ಯಥೇಚ್ಛವಾಗಿ ಸಿಗುತ್ತವೆ. ಭಾರತದ ಸಮಾಜವನ್ನು ಛಿದ್ರವಿಚ್ಛಿದ್ರಗೈದ ಮತ್ತು ಇಂದಿನ ಭರತಖಂಡದ ಸಮಸ್ಯೆಗಳಿಗೆ ಮೂಲ ಕಾರಣವಾದ ಮನುಧರ್ಮ ಶಾಸ್ತ್ರವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಸುಟ್ಟಿದ್ದರಲ್ಲಿ ದೊಡ್ಡ ಸಂದೇಶವಿದೆ. ಅದರ ಹೇಳಹೆಸರುಳಿಯದಂತೆ ಸುಟ್ಟು, ಬೂದಿಯನ್ನ ಅರಬ್ಬೀ ಸಮುದ್ರಕ್ಕೆರಚಿದಾಗ ಮಾತ್ರ ದೇಶ ಹಾಗೂ ಅಮಾಯಕ ಜನ ಅನಿಷ್ಠದ ಧರ್ಮಶೃಂಖಲೆಗಳಿಂದ ಪಾರಾಗುತ್ತಾರೆ. “ಶಾಸ್ತ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ತರ್ಕವೆಂಬುದು ತಗರ ಹೋರಟೆ” ಎಂದು ಅಲ್ಲಮಪ್ರಭುಗಳು ಹೇಳಿದ್ದಾರಲ್ಲ. ಹಾಗೆಯೇ, “ಶಾಸ್ತ್ರಕ್ಕೆ ನಿಗಳನಿಕ್ಕುವೆ, ತರ್ಕದ ಬೆನ್ನ ಭಾರನೆತ್ತುವೆ, ಆಗಮದ ಮೂಗ ಕುಯ್ಯುವೆ” ಎಂಬ ಬಸವಣ್ಣನ ಮಾತನ್ನ ದಾಖಲಿಸಿರುವ ಕುವೆಂಪು ಅದಾವ ಮಾನದಂಡದಿಂದ ಚಾತುರ್ವರ್ಣ ಒಪ್ಪಿದ್ದರೆಂಬುದನ್ನ ಚಕ್ರತೀರ್ಥರೇ ತೋರಿಸಬೇಕಾಗಿದೆಯಲ್ಲಾ ಥೂತ್ತೇರಿ.

******

ಇತ್ತ ಸಾಹಿತ್ಯ ಪರಿಷತ್ತಿಗೆ ವಕ್ಕರಿಸಿರುವ ಜೋಶಿ ಎಂಬಾತನ ಸುಳ್ಳಿಗೆ ಇಡೀ ನಾಡೇ ಬೆಚ್ಚಿ ಬಿದ್ದಿದೆಯಲ್ಲಾ. ಶಿಶುನಾಳ ಶರೀಫರು ತಮ್ಮ ಆಧ್ಯಾತ್ಮದ ಗುರುವಾದ ಗೋವಿಂದ ಭಟ್ಟರನ್ನ ವಜ್ರದ ಹರಳೆಂದು ಕರೆದಿದ್ದಾರೆ. ಶಿಶುನಾಳ ಶರೀಫ ಈ ನಾಡುಕಂಡ ಮಹಾನ್ ಕವಿ. ಈ ಕವಿಯನ್ನ ಶೋಧಿಸಿ ನಾಡ ಗಾಯಕರೆಲ್ಲಾ ಹಾಡಿದ್ದಾರೆ. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಈ ಚೇತನಗಳು ಕನ್ನಡದ ನೆಲದಲ್ಲಿ ಅಜರಾಮರವಾಗಿವೆ. ಶರೀಫರ ಕುಲಬಾಂಧವರಾರೂ ಅವರ ಸಂಬಂಧಿಗಳೆಂದು ಈವರೆಗೆ ಹೇಳಿಕೊಂಡಿಲ್ಲ. ಆದರೆ ಸಂಸಾರವೇ ಇಲ್ಲದೆ ಕಾಲವಾದ ಗೋವಿಂದ ಭಟ್ಟರ ವಂಶದ ಕುಡಿಯೊಂದು ಪ್ರತಿ ಮೂರು ಮಾತಿನ ನಡುವೆ ನಾನು ಗೋವಿಂದ ಭಟ್ಟರ ಮರಿಮೊಮ್ಮಮಗನೆಂದು ಹೇಳುತ್ತದೆಲ್ಲಾ. ಏನಾದರೂ ಪ್ರತಿಪಾದಿಸಿಕೊಂಡು ಹಾಳಾಗಿ ಹೋಗಲಿ ಎಂದರೆ, ಕನ್ನಡ ಸಾಂಸ್ಕೃತಿಕ ಲೋಕದ ಜಾತ್ಯತೀತ ವೇದಿಕೆಯಾದ ಸಾಹಿತ್ಯ ಪರಿಷತ್‌ಗೆ ಜನಿವಾರ ತೊಡಿಸುತ್ತಾ, ಸರಿಪಡಿಸಲಾಗದ ಅವಾಂತರ ಸೃಷ್ಟಿಸತೊಡಗಿದ್ದಾರೆ. ಒಂದು ವೇಳೆ ಈತ ಅಕಸ್ಮಾತ್ ಗೋವಿಂದ ಭಟ್ಟರ ಮರಿಮೊಮ್ಮಗನೇ ಆಗಿದ್ದರೆ ಕನ್ನಡದ ಪ್ರಗತಿಪರ ಚಿಂತಕರನ್ನು ಮನೋರೋಗದಿಂದ ಬಳಲುತ್ತಿರುವ ಜನ ಎಂದು ಸಂಬೋಧಿಸುತ್ತಿರಲಿಲ್ಲವಲ್ಲವೇ? ಥೂತ್ತೇರಿ.

*******

ಗುಜರಾತಿನ ಅಮಿತ್ ಶಾ ಎಂಬ ಅಮುಲ್ ಗಿರಾಕಿ ಮಂಡ್ಯಕ್ಕೆ ಬಂದುದ್ದೂ ಅಲ್ಲದೆ, ಕರ್ನಾಟಕದ ನಂದಿನಿಯನ್ನು ಅಮುಲ್ ಜೊತೆಗೆ ಸೇರಿಸಬೇಕು ಎಂದು ಬಿಟ್ಟಿದ್ದಾರಂತಲ್ಲಾ. ಶಾ ಅವರ ಇಂತಹ ಹೇಳಿಕೆಗೆ ಮಂಡ್ಯದ ಆ ಸಭೆಯಲ್ಲಿ ಯಾವ ಪ್ರತಿರೋಧವೂ ಬರಲಿಲ್ಲ. ಕಾರಣ ಅಲ್ಲಿ ಚಪ್ಪಾಳೆಗಾಗಿ ಕರೆದುಕೊಂಡು ಬಂದವರಿಗೆ ಶಾ ಹೇಳುವುದೇನು ಎಂಬುದೇ ತಿಳಿಯಲಿಲ್ಲ. ತಿಳಿದರೂ ಅವರ ಮಾತನ್ನು ಕೇಳುವವರು ಯಾರಿದ್ದರು ಅಲ್ಲಿ? ಆದರೆ ತಿಳಿದುಕೊಳ್ಳಬೇಕಾದವರು ತಮ್ಮ ರಾಸುಗಳ ಜೊತೆಗಿದ್ದರು. ರಾಸುಗಳ ಮೈ ತೊಳೆಯುವುದು, ಹಾಲು ಕರೆಯುವುದು, ಹುಲ್ಲು ಹಾಕುವುದು ಇತ್ಯಾದಿ ನಿರಂತರ ಕೆಲಸಗಳ ನಡುವೆ, ಇಂತಹ ಚಪ್ಪಾಳೆ ಸಂಸ್ಕೃತಿಗೆ ಹೊರತಾದ ಜನ ಅವರು. ಅಮುಲ್ ಹಾಲಿನೊಳಕ್ಕೆ ನಂದಿನಿ ಮಿಕ್ಸ್ ಮಾಡಿ ಕಡೆಗೆ ಅಮುಲ್ ಮಾತ್ರ ಬಳಸಿಕೊಂಡು ನಂದಿನಿಗೆ ತಿಲಾಂಜಲಿ ಇಡುವ ಹಿಕಮತ್ತಿನ ಭಾಷಣ ಅವರಿಗೆ ತಲುಪಲೇಯಿಲ್ಲ. ತಲುಪಿದ್ದೇ ಆದರೆ ಶಾ ಕಡೆಯವರು ಮಂಡ್ಯದ ಕಡೆ ಮುಖಹಾಕುವುದು ಕಷ್ಟವೆಂದರಿತು, ಶಾ ಹಾಗೆ ಹೇಳಿಲ್ಲ, ಅಮುಲ್ ಹಾಲಿನ ಹಂಡೆಗಳು ಮಂಡ್ಯಕ್ಕೆ ಬರುತ್ತವೆ, ಮಂಡ್ಯದ ಹಳೆ ಹಾಲಿನ ಕ್ಯಾನ್‌ಗಳು ಗುಜರಾತಿನ ಗುಜರಿ ಸೇರಿ ಹೊಸ ಕ್ಯಾನ್ ಬರುತ್ತವೆ ಎಂದು ಮುಖ್ಯಮಂತ್ರಿಯಿಂದ ಹಿಡಿದು ಕೂಗುಮಾರಿ ಸಿ.ಟಿ ರವಿವರೆಗೆ ಕರ್ನಾಟಕದ ಬಿಜೆಪಿಗಳು ಕೂಗುತ್ತಿವೆಯಲ್ಲಾ. ಮಂಡ್ಯದ ನೆಲ ಹುಟ್ಟಿಸಿದ ಭಯಕ್ಕೆ ಇನ್ನೇನು ಬೇಕು, ಥೂತ್ತೇರಿ.

******

ಮೈಸೂರು ರಂಗಾಯಣದ ಪ್ರದೇಶಕ್ಕೆ ಬಂದು ಸೇರಿಕೊಂಡಿರುವ ಅಡ್ನಾಡಿಗಳ ಅವಾಂತರಕ್ಕೆ ಹೇಸಿದ ಪ್ರಜ್ಞಾವಂತರಾರೂ ಆ ಕಡೆ ಸುಳಿಯದಿರುವುದು ಹಳೆಯ ಸುದ್ದಿ. ಈಗಾಗಲೇ ಟಿಪ್ಪು ಜೀವನವನ್ನ ವಿಕೃತಗೊಳಿಸಿ ನಾಟಕ ರಚಿಸಿ ಬೈಸಿಕೊಂಡವರ ಪೈಕಿ ಒಬ್ಬರು, ಚಂದ್ರಶೇಖರ ಕಂಬಾರರ ಸಾಂಭಶಿವ ಪ್ರಹಸನಕ್ಕೂ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರ ಕಾರ್ಯವೈಖರಿಗೂ ಸಂಬಂಧವೇ ಇಲ್ಲದಿದ್ದರೂ, ಅನ್ನಭಾಗ್ಯವನ್ನ ಆಡಿಕೊಂಡಿದ್ದಾರಂತಲ್ಲಾ. ವಾಸ್ತವವಾಗಿ ಈ ನಾಟಕ ನಿರ್ದೇಶಕನಿಗೆ ಬಂದ ಧೈರ್ಯದ ಪ್ರೇರಣೆಯಾವುದೆಂದರೆ ಟಿಪ್ಪುವಿನ ಚರಿತ್ರೆಯನ್ನು ವಿಕೃತವಾಗಿ ತಿರುಚಿ ಆಡಿಸಿದ ನಾಟಕವೇ. ಇಂತಹವರ ವಿಕೃತಿಗೆ ಅಂತ್ಯ ಅಡುವುದು ಮೈಸೂರಿನ ಪ್ರಜ್ಞಾವಂತರ ಕೆಲಸ. ಈ ದೇಶವೇ ಕೊಂಡಾಡಿದ ಮೈಸೂರಿನ ಮಹಾರಾಜರ ಕರ್ಮ ಭೂಮಿಯಲ್ಲಿ, ಅದರಲ್ಲೂ ರಂಗಾಯಣದ ಆವರಣದಲ್ಲಿ, ಇತಿಹಾಸವನ್ನೇ ತಿರುಚುವ ವಿಕೃತಿಗಳು, ಕಲೆ ಸಾಹಿತ್ಯ ಸಂಗೀತವನ್ನೇ ಹಾಳುಮಾಡುವ ಕ್ರಿಮಿ ಕೀಟಗಳು ಇರಬಾರದಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...