Homeಅಂಕಣಗಳುಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

ಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

- Advertisement -
- Advertisement -

ಕನ್ನಡದ ಸಾಂಸ್ಕೃತಿಕ ಲೋಕದೊಳಕ್ಕೆ ನುಗ್ಗಿರುವ ಪುರೋಹಿತಶಾಹಿಗಳ ಸುಳ್ಳುಗಳು ವಿಜೃಂಭಿಸತೊಡಗಿದೆಯಲ್ಲಾ. ಈ ಪೈಕಿ ಕುವೆಂಪು ಸಾಹಿತ್ಯವನ್ನು ’ತಿದ್ದಲು’ ಹೋಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿ ಸಿಕ್ಕಿಬಿದ್ದರಲ್ಲಾ. ಕುವೆಂಪು ನಡೆದಾಡಿದ ಪ್ರದೇಶಕ್ಕೆ ಬಂದು ಕುವೆಂಪು ಚಾತುವರ್ಣದ ವಿರೋಧಿಯಾಗಿರಲಿಲ್ಲ ಎಂದಿದ್ದಾರಲ್ಲ. ಸದರಿ ಹೇಳಿಕೆಗೆ ಅಂತಹಾ ಪ್ರತಿಭಟನೆ ಕಂಡುಬಂದಿಲ್ಲ. ಏಕೆಂದರೆ ಒಬ್ಬ ವ್ಯಕ್ತಿ ಸುಳ್ಳನ್ನೇ ಹೇಳುತ್ತ ಜೀವಿಸುವುದಾದರೆ ನಮ್ಮ ಜನ ತಾತ್ಸಾರ ಮಾಡುತ್ತಾರೆ. ಹಾಗೆಯೇ ನಾಡಿನ ಪ್ರಜ್ಞಾವಂತರ ತಾತ್ಸಾರಕ್ಕೆ ಗುರಿಯಾಗಿರುವ ಚಕ್ರತೀರ್ಥ ಕುವೆಂಪುರವರನ್ನು, ಪಟ್ಟಾಗಿ ಕುಳಿತು ಓದಿದ್ದಾದರೆ ಅಲ್ಲಿ ಚಾತುರ್ವಣಕ್ಕೆ ಚಾಟೀ ಬೀಸಿರುವ ಮಾತುಗಳು ಯಥೇಚ್ಛವಾಗಿ ಸಿಗುತ್ತವೆ. ಭಾರತದ ಸಮಾಜವನ್ನು ಛಿದ್ರವಿಚ್ಛಿದ್ರಗೈದ ಮತ್ತು ಇಂದಿನ ಭರತಖಂಡದ ಸಮಸ್ಯೆಗಳಿಗೆ ಮೂಲ ಕಾರಣವಾದ ಮನುಧರ್ಮ ಶಾಸ್ತ್ರವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಸುಟ್ಟಿದ್ದರಲ್ಲಿ ದೊಡ್ಡ ಸಂದೇಶವಿದೆ. ಅದರ ಹೇಳಹೆಸರುಳಿಯದಂತೆ ಸುಟ್ಟು, ಬೂದಿಯನ್ನ ಅರಬ್ಬೀ ಸಮುದ್ರಕ್ಕೆರಚಿದಾಗ ಮಾತ್ರ ದೇಶ ಹಾಗೂ ಅಮಾಯಕ ಜನ ಅನಿಷ್ಠದ ಧರ್ಮಶೃಂಖಲೆಗಳಿಂದ ಪಾರಾಗುತ್ತಾರೆ. “ಶಾಸ್ತ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ತರ್ಕವೆಂಬುದು ತಗರ ಹೋರಟೆ” ಎಂದು ಅಲ್ಲಮಪ್ರಭುಗಳು ಹೇಳಿದ್ದಾರಲ್ಲ. ಹಾಗೆಯೇ, “ಶಾಸ್ತ್ರಕ್ಕೆ ನಿಗಳನಿಕ್ಕುವೆ, ತರ್ಕದ ಬೆನ್ನ ಭಾರನೆತ್ತುವೆ, ಆಗಮದ ಮೂಗ ಕುಯ್ಯುವೆ” ಎಂಬ ಬಸವಣ್ಣನ ಮಾತನ್ನ ದಾಖಲಿಸಿರುವ ಕುವೆಂಪು ಅದಾವ ಮಾನದಂಡದಿಂದ ಚಾತುರ್ವರ್ಣ ಒಪ್ಪಿದ್ದರೆಂಬುದನ್ನ ಚಕ್ರತೀರ್ಥರೇ ತೋರಿಸಬೇಕಾಗಿದೆಯಲ್ಲಾ ಥೂತ್ತೇರಿ.

******

ಇತ್ತ ಸಾಹಿತ್ಯ ಪರಿಷತ್ತಿಗೆ ವಕ್ಕರಿಸಿರುವ ಜೋಶಿ ಎಂಬಾತನ ಸುಳ್ಳಿಗೆ ಇಡೀ ನಾಡೇ ಬೆಚ್ಚಿ ಬಿದ್ದಿದೆಯಲ್ಲಾ. ಶಿಶುನಾಳ ಶರೀಫರು ತಮ್ಮ ಆಧ್ಯಾತ್ಮದ ಗುರುವಾದ ಗೋವಿಂದ ಭಟ್ಟರನ್ನ ವಜ್ರದ ಹರಳೆಂದು ಕರೆದಿದ್ದಾರೆ. ಶಿಶುನಾಳ ಶರೀಫ ಈ ನಾಡುಕಂಡ ಮಹಾನ್ ಕವಿ. ಈ ಕವಿಯನ್ನ ಶೋಧಿಸಿ ನಾಡ ಗಾಯಕರೆಲ್ಲಾ ಹಾಡಿದ್ದಾರೆ. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಈ ಚೇತನಗಳು ಕನ್ನಡದ ನೆಲದಲ್ಲಿ ಅಜರಾಮರವಾಗಿವೆ. ಶರೀಫರ ಕುಲಬಾಂಧವರಾರೂ ಅವರ ಸಂಬಂಧಿಗಳೆಂದು ಈವರೆಗೆ ಹೇಳಿಕೊಂಡಿಲ್ಲ. ಆದರೆ ಸಂಸಾರವೇ ಇಲ್ಲದೆ ಕಾಲವಾದ ಗೋವಿಂದ ಭಟ್ಟರ ವಂಶದ ಕುಡಿಯೊಂದು ಪ್ರತಿ ಮೂರು ಮಾತಿನ ನಡುವೆ ನಾನು ಗೋವಿಂದ ಭಟ್ಟರ ಮರಿಮೊಮ್ಮಮಗನೆಂದು ಹೇಳುತ್ತದೆಲ್ಲಾ. ಏನಾದರೂ ಪ್ರತಿಪಾದಿಸಿಕೊಂಡು ಹಾಳಾಗಿ ಹೋಗಲಿ ಎಂದರೆ, ಕನ್ನಡ ಸಾಂಸ್ಕೃತಿಕ ಲೋಕದ ಜಾತ್ಯತೀತ ವೇದಿಕೆಯಾದ ಸಾಹಿತ್ಯ ಪರಿಷತ್‌ಗೆ ಜನಿವಾರ ತೊಡಿಸುತ್ತಾ, ಸರಿಪಡಿಸಲಾಗದ ಅವಾಂತರ ಸೃಷ್ಟಿಸತೊಡಗಿದ್ದಾರೆ. ಒಂದು ವೇಳೆ ಈತ ಅಕಸ್ಮಾತ್ ಗೋವಿಂದ ಭಟ್ಟರ ಮರಿಮೊಮ್ಮಗನೇ ಆಗಿದ್ದರೆ ಕನ್ನಡದ ಪ್ರಗತಿಪರ ಚಿಂತಕರನ್ನು ಮನೋರೋಗದಿಂದ ಬಳಲುತ್ತಿರುವ ಜನ ಎಂದು ಸಂಬೋಧಿಸುತ್ತಿರಲಿಲ್ಲವಲ್ಲವೇ? ಥೂತ್ತೇರಿ.

*******

ಗುಜರಾತಿನ ಅಮಿತ್ ಶಾ ಎಂಬ ಅಮುಲ್ ಗಿರಾಕಿ ಮಂಡ್ಯಕ್ಕೆ ಬಂದುದ್ದೂ ಅಲ್ಲದೆ, ಕರ್ನಾಟಕದ ನಂದಿನಿಯನ್ನು ಅಮುಲ್ ಜೊತೆಗೆ ಸೇರಿಸಬೇಕು ಎಂದು ಬಿಟ್ಟಿದ್ದಾರಂತಲ್ಲಾ. ಶಾ ಅವರ ಇಂತಹ ಹೇಳಿಕೆಗೆ ಮಂಡ್ಯದ ಆ ಸಭೆಯಲ್ಲಿ ಯಾವ ಪ್ರತಿರೋಧವೂ ಬರಲಿಲ್ಲ. ಕಾರಣ ಅಲ್ಲಿ ಚಪ್ಪಾಳೆಗಾಗಿ ಕರೆದುಕೊಂಡು ಬಂದವರಿಗೆ ಶಾ ಹೇಳುವುದೇನು ಎಂಬುದೇ ತಿಳಿಯಲಿಲ್ಲ. ತಿಳಿದರೂ ಅವರ ಮಾತನ್ನು ಕೇಳುವವರು ಯಾರಿದ್ದರು ಅಲ್ಲಿ? ಆದರೆ ತಿಳಿದುಕೊಳ್ಳಬೇಕಾದವರು ತಮ್ಮ ರಾಸುಗಳ ಜೊತೆಗಿದ್ದರು. ರಾಸುಗಳ ಮೈ ತೊಳೆಯುವುದು, ಹಾಲು ಕರೆಯುವುದು, ಹುಲ್ಲು ಹಾಕುವುದು ಇತ್ಯಾದಿ ನಿರಂತರ ಕೆಲಸಗಳ ನಡುವೆ, ಇಂತಹ ಚಪ್ಪಾಳೆ ಸಂಸ್ಕೃತಿಗೆ ಹೊರತಾದ ಜನ ಅವರು. ಅಮುಲ್ ಹಾಲಿನೊಳಕ್ಕೆ ನಂದಿನಿ ಮಿಕ್ಸ್ ಮಾಡಿ ಕಡೆಗೆ ಅಮುಲ್ ಮಾತ್ರ ಬಳಸಿಕೊಂಡು ನಂದಿನಿಗೆ ತಿಲಾಂಜಲಿ ಇಡುವ ಹಿಕಮತ್ತಿನ ಭಾಷಣ ಅವರಿಗೆ ತಲುಪಲೇಯಿಲ್ಲ. ತಲುಪಿದ್ದೇ ಆದರೆ ಶಾ ಕಡೆಯವರು ಮಂಡ್ಯದ ಕಡೆ ಮುಖಹಾಕುವುದು ಕಷ್ಟವೆಂದರಿತು, ಶಾ ಹಾಗೆ ಹೇಳಿಲ್ಲ, ಅಮುಲ್ ಹಾಲಿನ ಹಂಡೆಗಳು ಮಂಡ್ಯಕ್ಕೆ ಬರುತ್ತವೆ, ಮಂಡ್ಯದ ಹಳೆ ಹಾಲಿನ ಕ್ಯಾನ್‌ಗಳು ಗುಜರಾತಿನ ಗುಜರಿ ಸೇರಿ ಹೊಸ ಕ್ಯಾನ್ ಬರುತ್ತವೆ ಎಂದು ಮುಖ್ಯಮಂತ್ರಿಯಿಂದ ಹಿಡಿದು ಕೂಗುಮಾರಿ ಸಿ.ಟಿ ರವಿವರೆಗೆ ಕರ್ನಾಟಕದ ಬಿಜೆಪಿಗಳು ಕೂಗುತ್ತಿವೆಯಲ್ಲಾ. ಮಂಡ್ಯದ ನೆಲ ಹುಟ್ಟಿಸಿದ ಭಯಕ್ಕೆ ಇನ್ನೇನು ಬೇಕು, ಥೂತ್ತೇರಿ.

******

ಮೈಸೂರು ರಂಗಾಯಣದ ಪ್ರದೇಶಕ್ಕೆ ಬಂದು ಸೇರಿಕೊಂಡಿರುವ ಅಡ್ನಾಡಿಗಳ ಅವಾಂತರಕ್ಕೆ ಹೇಸಿದ ಪ್ರಜ್ಞಾವಂತರಾರೂ ಆ ಕಡೆ ಸುಳಿಯದಿರುವುದು ಹಳೆಯ ಸುದ್ದಿ. ಈಗಾಗಲೇ ಟಿಪ್ಪು ಜೀವನವನ್ನ ವಿಕೃತಗೊಳಿಸಿ ನಾಟಕ ರಚಿಸಿ ಬೈಸಿಕೊಂಡವರ ಪೈಕಿ ಒಬ್ಬರು, ಚಂದ್ರಶೇಖರ ಕಂಬಾರರ ಸಾಂಭಶಿವ ಪ್ರಹಸನಕ್ಕೂ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರ ಕಾರ್ಯವೈಖರಿಗೂ ಸಂಬಂಧವೇ ಇಲ್ಲದಿದ್ದರೂ, ಅನ್ನಭಾಗ್ಯವನ್ನ ಆಡಿಕೊಂಡಿದ್ದಾರಂತಲ್ಲಾ. ವಾಸ್ತವವಾಗಿ ಈ ನಾಟಕ ನಿರ್ದೇಶಕನಿಗೆ ಬಂದ ಧೈರ್ಯದ ಪ್ರೇರಣೆಯಾವುದೆಂದರೆ ಟಿಪ್ಪುವಿನ ಚರಿತ್ರೆಯನ್ನು ವಿಕೃತವಾಗಿ ತಿರುಚಿ ಆಡಿಸಿದ ನಾಟಕವೇ. ಇಂತಹವರ ವಿಕೃತಿಗೆ ಅಂತ್ಯ ಅಡುವುದು ಮೈಸೂರಿನ ಪ್ರಜ್ಞಾವಂತರ ಕೆಲಸ. ಈ ದೇಶವೇ ಕೊಂಡಾಡಿದ ಮೈಸೂರಿನ ಮಹಾರಾಜರ ಕರ್ಮ ಭೂಮಿಯಲ್ಲಿ, ಅದರಲ್ಲೂ ರಂಗಾಯಣದ ಆವರಣದಲ್ಲಿ, ಇತಿಹಾಸವನ್ನೇ ತಿರುಚುವ ವಿಕೃತಿಗಳು, ಕಲೆ ಸಾಹಿತ್ಯ ಸಂಗೀತವನ್ನೇ ಹಾಳುಮಾಡುವ ಕ್ರಿಮಿ ಕೀಟಗಳು ಇರಬಾರದಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...