Homeಅಂಕಣಗಳುಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

ಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

- Advertisement -
- Advertisement -

ಕನ್ನಡದ ಸಾಂಸ್ಕೃತಿಕ ಲೋಕದೊಳಕ್ಕೆ ನುಗ್ಗಿರುವ ಪುರೋಹಿತಶಾಹಿಗಳ ಸುಳ್ಳುಗಳು ವಿಜೃಂಭಿಸತೊಡಗಿದೆಯಲ್ಲಾ. ಈ ಪೈಕಿ ಕುವೆಂಪು ಸಾಹಿತ್ಯವನ್ನು ’ತಿದ್ದಲು’ ಹೋಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿ ಸಿಕ್ಕಿಬಿದ್ದರಲ್ಲಾ. ಕುವೆಂಪು ನಡೆದಾಡಿದ ಪ್ರದೇಶಕ್ಕೆ ಬಂದು ಕುವೆಂಪು ಚಾತುವರ್ಣದ ವಿರೋಧಿಯಾಗಿರಲಿಲ್ಲ ಎಂದಿದ್ದಾರಲ್ಲ. ಸದರಿ ಹೇಳಿಕೆಗೆ ಅಂತಹಾ ಪ್ರತಿಭಟನೆ ಕಂಡುಬಂದಿಲ್ಲ. ಏಕೆಂದರೆ ಒಬ್ಬ ವ್ಯಕ್ತಿ ಸುಳ್ಳನ್ನೇ ಹೇಳುತ್ತ ಜೀವಿಸುವುದಾದರೆ ನಮ್ಮ ಜನ ತಾತ್ಸಾರ ಮಾಡುತ್ತಾರೆ. ಹಾಗೆಯೇ ನಾಡಿನ ಪ್ರಜ್ಞಾವಂತರ ತಾತ್ಸಾರಕ್ಕೆ ಗುರಿಯಾಗಿರುವ ಚಕ್ರತೀರ್ಥ ಕುವೆಂಪುರವರನ್ನು, ಪಟ್ಟಾಗಿ ಕುಳಿತು ಓದಿದ್ದಾದರೆ ಅಲ್ಲಿ ಚಾತುರ್ವಣಕ್ಕೆ ಚಾಟೀ ಬೀಸಿರುವ ಮಾತುಗಳು ಯಥೇಚ್ಛವಾಗಿ ಸಿಗುತ್ತವೆ. ಭಾರತದ ಸಮಾಜವನ್ನು ಛಿದ್ರವಿಚ್ಛಿದ್ರಗೈದ ಮತ್ತು ಇಂದಿನ ಭರತಖಂಡದ ಸಮಸ್ಯೆಗಳಿಗೆ ಮೂಲ ಕಾರಣವಾದ ಮನುಧರ್ಮ ಶಾಸ್ತ್ರವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಸುಟ್ಟಿದ್ದರಲ್ಲಿ ದೊಡ್ಡ ಸಂದೇಶವಿದೆ. ಅದರ ಹೇಳಹೆಸರುಳಿಯದಂತೆ ಸುಟ್ಟು, ಬೂದಿಯನ್ನ ಅರಬ್ಬೀ ಸಮುದ್ರಕ್ಕೆರಚಿದಾಗ ಮಾತ್ರ ದೇಶ ಹಾಗೂ ಅಮಾಯಕ ಜನ ಅನಿಷ್ಠದ ಧರ್ಮಶೃಂಖಲೆಗಳಿಂದ ಪಾರಾಗುತ್ತಾರೆ. “ಶಾಸ್ತ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ತರ್ಕವೆಂಬುದು ತಗರ ಹೋರಟೆ” ಎಂದು ಅಲ್ಲಮಪ್ರಭುಗಳು ಹೇಳಿದ್ದಾರಲ್ಲ. ಹಾಗೆಯೇ, “ಶಾಸ್ತ್ರಕ್ಕೆ ನಿಗಳನಿಕ್ಕುವೆ, ತರ್ಕದ ಬೆನ್ನ ಭಾರನೆತ್ತುವೆ, ಆಗಮದ ಮೂಗ ಕುಯ್ಯುವೆ” ಎಂಬ ಬಸವಣ್ಣನ ಮಾತನ್ನ ದಾಖಲಿಸಿರುವ ಕುವೆಂಪು ಅದಾವ ಮಾನದಂಡದಿಂದ ಚಾತುರ್ವರ್ಣ ಒಪ್ಪಿದ್ದರೆಂಬುದನ್ನ ಚಕ್ರತೀರ್ಥರೇ ತೋರಿಸಬೇಕಾಗಿದೆಯಲ್ಲಾ ಥೂತ್ತೇರಿ.

******

ಇತ್ತ ಸಾಹಿತ್ಯ ಪರಿಷತ್ತಿಗೆ ವಕ್ಕರಿಸಿರುವ ಜೋಶಿ ಎಂಬಾತನ ಸುಳ್ಳಿಗೆ ಇಡೀ ನಾಡೇ ಬೆಚ್ಚಿ ಬಿದ್ದಿದೆಯಲ್ಲಾ. ಶಿಶುನಾಳ ಶರೀಫರು ತಮ್ಮ ಆಧ್ಯಾತ್ಮದ ಗುರುವಾದ ಗೋವಿಂದ ಭಟ್ಟರನ್ನ ವಜ್ರದ ಹರಳೆಂದು ಕರೆದಿದ್ದಾರೆ. ಶಿಶುನಾಳ ಶರೀಫ ಈ ನಾಡುಕಂಡ ಮಹಾನ್ ಕವಿ. ಈ ಕವಿಯನ್ನ ಶೋಧಿಸಿ ನಾಡ ಗಾಯಕರೆಲ್ಲಾ ಹಾಡಿದ್ದಾರೆ. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಈ ಚೇತನಗಳು ಕನ್ನಡದ ನೆಲದಲ್ಲಿ ಅಜರಾಮರವಾಗಿವೆ. ಶರೀಫರ ಕುಲಬಾಂಧವರಾರೂ ಅವರ ಸಂಬಂಧಿಗಳೆಂದು ಈವರೆಗೆ ಹೇಳಿಕೊಂಡಿಲ್ಲ. ಆದರೆ ಸಂಸಾರವೇ ಇಲ್ಲದೆ ಕಾಲವಾದ ಗೋವಿಂದ ಭಟ್ಟರ ವಂಶದ ಕುಡಿಯೊಂದು ಪ್ರತಿ ಮೂರು ಮಾತಿನ ನಡುವೆ ನಾನು ಗೋವಿಂದ ಭಟ್ಟರ ಮರಿಮೊಮ್ಮಮಗನೆಂದು ಹೇಳುತ್ತದೆಲ್ಲಾ. ಏನಾದರೂ ಪ್ರತಿಪಾದಿಸಿಕೊಂಡು ಹಾಳಾಗಿ ಹೋಗಲಿ ಎಂದರೆ, ಕನ್ನಡ ಸಾಂಸ್ಕೃತಿಕ ಲೋಕದ ಜಾತ್ಯತೀತ ವೇದಿಕೆಯಾದ ಸಾಹಿತ್ಯ ಪರಿಷತ್‌ಗೆ ಜನಿವಾರ ತೊಡಿಸುತ್ತಾ, ಸರಿಪಡಿಸಲಾಗದ ಅವಾಂತರ ಸೃಷ್ಟಿಸತೊಡಗಿದ್ದಾರೆ. ಒಂದು ವೇಳೆ ಈತ ಅಕಸ್ಮಾತ್ ಗೋವಿಂದ ಭಟ್ಟರ ಮರಿಮೊಮ್ಮಗನೇ ಆಗಿದ್ದರೆ ಕನ್ನಡದ ಪ್ರಗತಿಪರ ಚಿಂತಕರನ್ನು ಮನೋರೋಗದಿಂದ ಬಳಲುತ್ತಿರುವ ಜನ ಎಂದು ಸಂಬೋಧಿಸುತ್ತಿರಲಿಲ್ಲವಲ್ಲವೇ? ಥೂತ್ತೇರಿ.

*******

ಗುಜರಾತಿನ ಅಮಿತ್ ಶಾ ಎಂಬ ಅಮುಲ್ ಗಿರಾಕಿ ಮಂಡ್ಯಕ್ಕೆ ಬಂದುದ್ದೂ ಅಲ್ಲದೆ, ಕರ್ನಾಟಕದ ನಂದಿನಿಯನ್ನು ಅಮುಲ್ ಜೊತೆಗೆ ಸೇರಿಸಬೇಕು ಎಂದು ಬಿಟ್ಟಿದ್ದಾರಂತಲ್ಲಾ. ಶಾ ಅವರ ಇಂತಹ ಹೇಳಿಕೆಗೆ ಮಂಡ್ಯದ ಆ ಸಭೆಯಲ್ಲಿ ಯಾವ ಪ್ರತಿರೋಧವೂ ಬರಲಿಲ್ಲ. ಕಾರಣ ಅಲ್ಲಿ ಚಪ್ಪಾಳೆಗಾಗಿ ಕರೆದುಕೊಂಡು ಬಂದವರಿಗೆ ಶಾ ಹೇಳುವುದೇನು ಎಂಬುದೇ ತಿಳಿಯಲಿಲ್ಲ. ತಿಳಿದರೂ ಅವರ ಮಾತನ್ನು ಕೇಳುವವರು ಯಾರಿದ್ದರು ಅಲ್ಲಿ? ಆದರೆ ತಿಳಿದುಕೊಳ್ಳಬೇಕಾದವರು ತಮ್ಮ ರಾಸುಗಳ ಜೊತೆಗಿದ್ದರು. ರಾಸುಗಳ ಮೈ ತೊಳೆಯುವುದು, ಹಾಲು ಕರೆಯುವುದು, ಹುಲ್ಲು ಹಾಕುವುದು ಇತ್ಯಾದಿ ನಿರಂತರ ಕೆಲಸಗಳ ನಡುವೆ, ಇಂತಹ ಚಪ್ಪಾಳೆ ಸಂಸ್ಕೃತಿಗೆ ಹೊರತಾದ ಜನ ಅವರು. ಅಮುಲ್ ಹಾಲಿನೊಳಕ್ಕೆ ನಂದಿನಿ ಮಿಕ್ಸ್ ಮಾಡಿ ಕಡೆಗೆ ಅಮುಲ್ ಮಾತ್ರ ಬಳಸಿಕೊಂಡು ನಂದಿನಿಗೆ ತಿಲಾಂಜಲಿ ಇಡುವ ಹಿಕಮತ್ತಿನ ಭಾಷಣ ಅವರಿಗೆ ತಲುಪಲೇಯಿಲ್ಲ. ತಲುಪಿದ್ದೇ ಆದರೆ ಶಾ ಕಡೆಯವರು ಮಂಡ್ಯದ ಕಡೆ ಮುಖಹಾಕುವುದು ಕಷ್ಟವೆಂದರಿತು, ಶಾ ಹಾಗೆ ಹೇಳಿಲ್ಲ, ಅಮುಲ್ ಹಾಲಿನ ಹಂಡೆಗಳು ಮಂಡ್ಯಕ್ಕೆ ಬರುತ್ತವೆ, ಮಂಡ್ಯದ ಹಳೆ ಹಾಲಿನ ಕ್ಯಾನ್‌ಗಳು ಗುಜರಾತಿನ ಗುಜರಿ ಸೇರಿ ಹೊಸ ಕ್ಯಾನ್ ಬರುತ್ತವೆ ಎಂದು ಮುಖ್ಯಮಂತ್ರಿಯಿಂದ ಹಿಡಿದು ಕೂಗುಮಾರಿ ಸಿ.ಟಿ ರವಿವರೆಗೆ ಕರ್ನಾಟಕದ ಬಿಜೆಪಿಗಳು ಕೂಗುತ್ತಿವೆಯಲ್ಲಾ. ಮಂಡ್ಯದ ನೆಲ ಹುಟ್ಟಿಸಿದ ಭಯಕ್ಕೆ ಇನ್ನೇನು ಬೇಕು, ಥೂತ್ತೇರಿ.

******

ಮೈಸೂರು ರಂಗಾಯಣದ ಪ್ರದೇಶಕ್ಕೆ ಬಂದು ಸೇರಿಕೊಂಡಿರುವ ಅಡ್ನಾಡಿಗಳ ಅವಾಂತರಕ್ಕೆ ಹೇಸಿದ ಪ್ರಜ್ಞಾವಂತರಾರೂ ಆ ಕಡೆ ಸುಳಿಯದಿರುವುದು ಹಳೆಯ ಸುದ್ದಿ. ಈಗಾಗಲೇ ಟಿಪ್ಪು ಜೀವನವನ್ನ ವಿಕೃತಗೊಳಿಸಿ ನಾಟಕ ರಚಿಸಿ ಬೈಸಿಕೊಂಡವರ ಪೈಕಿ ಒಬ್ಬರು, ಚಂದ್ರಶೇಖರ ಕಂಬಾರರ ಸಾಂಭಶಿವ ಪ್ರಹಸನಕ್ಕೂ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರ ಕಾರ್ಯವೈಖರಿಗೂ ಸಂಬಂಧವೇ ಇಲ್ಲದಿದ್ದರೂ, ಅನ್ನಭಾಗ್ಯವನ್ನ ಆಡಿಕೊಂಡಿದ್ದಾರಂತಲ್ಲಾ. ವಾಸ್ತವವಾಗಿ ಈ ನಾಟಕ ನಿರ್ದೇಶಕನಿಗೆ ಬಂದ ಧೈರ್ಯದ ಪ್ರೇರಣೆಯಾವುದೆಂದರೆ ಟಿಪ್ಪುವಿನ ಚರಿತ್ರೆಯನ್ನು ವಿಕೃತವಾಗಿ ತಿರುಚಿ ಆಡಿಸಿದ ನಾಟಕವೇ. ಇಂತಹವರ ವಿಕೃತಿಗೆ ಅಂತ್ಯ ಅಡುವುದು ಮೈಸೂರಿನ ಪ್ರಜ್ಞಾವಂತರ ಕೆಲಸ. ಈ ದೇಶವೇ ಕೊಂಡಾಡಿದ ಮೈಸೂರಿನ ಮಹಾರಾಜರ ಕರ್ಮ ಭೂಮಿಯಲ್ಲಿ, ಅದರಲ್ಲೂ ರಂಗಾಯಣದ ಆವರಣದಲ್ಲಿ, ಇತಿಹಾಸವನ್ನೇ ತಿರುಚುವ ವಿಕೃತಿಗಳು, ಕಲೆ ಸಾಹಿತ್ಯ ಸಂಗೀತವನ್ನೇ ಹಾಳುಮಾಡುವ ಕ್ರಿಮಿ ಕೀಟಗಳು ಇರಬಾರದಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...