Homeಮುಖಪುಟಬಲವಂತದ ದುಡಿಮೆಗೆ ನಿರಾಕರಣೆ : ಸಾರ್ವಜನಿಕವಾಗಿ ವ್ಯಕ್ತಿಯ ತಲೆ ಬೋಳಿಸಿ ದೌರ್ಜನ್ಯ

ಬಲವಂತದ ದುಡಿಮೆಗೆ ನಿರಾಕರಣೆ : ಸಾರ್ವಜನಿಕವಾಗಿ ವ್ಯಕ್ತಿಯ ತಲೆ ಬೋಳಿಸಿ ದೌರ್ಜನ್ಯ

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರ ತಲೆಯನ್ನು ಸಾರ್ವಜನಿಕ ಸ್ಥಳದಲ್ಲಿ ಬಲವಂತವಾಗಿ ಬೋಳಿಸಿ ಅವಮಾನಿಸುವ ಮೂಲಕ ದೌರ್ಜನ್ಯವೆಸಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ಸೇರಿದಂತೆ ಅನೇಕರು ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಝಾನ್ಸಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಪ್ರಭಾವಿ ಕುಟುಂಬವೊಂದು ತಮ್ಮ ಪ್ರಾಣಿಗಳಿಗೆ ಆಹಾರ, ನೀರು ಕೊಡುವುದು ಸೇರಿದಂತೆ ಅವುಗಳನ್ನು ನೋಡಿಕೊಳ್ಳಲು ಸಂತ್ರಸ್ತ ವ್ಯಕ್ತಿಗೆ ಹೇಳಿತ್ತು, ಅವರು ಅದಕ್ಕೆ ಒಪ್ಪಿರಲಿಲ್ಲ. ಈ ಕಾರಣಕ್ಕೆ ತಲೆ ಬೋಳಿಸಿ ದೌರ್ಜನ್ಯ ನಡೆಸಲಾಗಿದೆ.

ಪತ್ರಕರ್ತ ರಣವಿಜಯ್ ಸಿಂಗ್ ಎಂಬವರು ಮೊದಲು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಆ ಬಳಿಕ ಅದು ವೈರಲ್ ಆಗಿದೆ. ರಣವಿಜಯ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಝಾನ್ಸಿ ಪೊಲೀಸರು ” ಇದು ಸಿಪ್ರಿ ಬಝಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೆಲ ವ್ಯಕ್ತಿಗಳು ಕ್ಷುಲ್ಲಕ ಕಾರಣಕ್ಕೆ ಅಕ್ಟೋಬರ್ 22ರಂದು ಮಧ್ಯಾಹ್ನ 2.30ರ ಸುಮಾರಿಗೆ ನನಗೆ ಥಳಿಸಿ ದೌರ್ಜನ್ಯ ನಡೆಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಕ್ಟೋಬರ್ 23ರಂದು ಬಾಬಾ ಎಂಬವರು ದೂರು ನೀಡಿದ್ದಾರೆ. ದೂರಿನ ಅನ್ವಯ ನಾಲ್ಕು ಮಂದಿಯ ವಿರುದ್ದ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಅವರ ಶೀಘ್ರ ಬಂಧನಕ್ಕೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ಜಾಲತಾಣಗಳ ಮೂಲಕ ದೌರ್ಜನ್ಯದ ವಿಡಿಯೋ ಬೆಳಕಿಗೆ ಬಂದಿದೆ. ಅದರಲ್ಲಿ ದೂರುದಾರನ ತಲೆ ಬೋಳಿಸಿರುವುದು ಕಂಡು ಬಂದಿದೆ. ಅದನ್ನೂ ಪರಿಗಣಿಸಿ ಈಗಾಗಲೇ ದಾಖಲಾದ ಪ್ರಕರಣದಲ್ಲಿ ಸೇರಿಸಲಾಗುವುದು. ಸೂಕ್ತ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ “ಉತ್ತರ ಪ್ರದೇಶದ ಝಾನ್ಸಿಯಿಂದ ವಿಡಿಯೋವೊಂದು ವೈರಲ್ ಆಗುತ್ತಿದೆ. ಅದರಲ್ಲಿ ವ್ಯಕ್ತಿಯೊಬ್ಬರ ತಲೆಯನ್ನು ಬಲವಂತವಾಗಿ ಬೋಳಿಸುತ್ತಿರುವುದು ಕಾಣಬಹುದು. ವಿಡಿಯೋದಲ್ಲಿರುವ ವ್ಯಕ್ತಿ ಮಾಡಿರುವ ತಪ್ಪೆಂದರೆ ಬಲವಂತದ ದುಡಿಮೆಗೆ ನಿರಾಕರಿಸಿರುವುದು. ಇಷ್ಟಕ್ಕೆ ದುರಹಂಕಾರಿಗಳು ಅವರಿಗೆ ಹೊಡೆದು, ಮರಕ್ಕೆ ತಲೆಕೆಳಗಾಗಿ ನೇತುಹಾಕಿ, ಅವರ ಕೂದಲನ್ನು ಕತ್ತರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ಬಡ ಮತ್ತು ಅಸಹಾಯಕ ಕಾರ್ಮಿಕರ ಘನತೆ ಮತ್ತು ಸ್ವಾಭಿಮಾನವನ್ನು ಬಹಿರಂಗವಾಗಿ ತುಳಿಯುವ ಬಿಜೆಪಿಯ ಜಂಗಲ್ ರಾಜ್‌ನ ಹೃದಯವಿದ್ರಾವಕ ಚಿತ್ರಣ ಇದಾಗಿದೆ. ಅಲ್ಲಿ ಪೊಲೀಸರು, ಆಡಳಿತ ಮತ್ತು ಸರ್ಕಾರ ಕೇವಲ ರೌಡಿಗಳ ಮತ್ತು ಅಪರಾಧಿಗಳ ರಕ್ಷಣೆಗಾಗಿ ಕೆಲಸ ಮಾಡುತ್ತದೆ. ಆದರೆ, ಬಡವರ ಬಗ್ಗೆ ಕೇಳುವುದೇ ಇಲ್ಲ. ನಾಚಿಕೆಗೇಡು” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : ಕಡಪ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿ; ಪೋಕ್ಸೋ ಕೇಸ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...