Homeಮುಖಪುಟಬಲವಂತದ ದುಡಿಮೆಗೆ ನಿರಾಕರಣೆ : ಸಾರ್ವಜನಿಕವಾಗಿ ವ್ಯಕ್ತಿಯ ತಲೆ ಬೋಳಿಸಿ ದೌರ್ಜನ್ಯ

ಬಲವಂತದ ದುಡಿಮೆಗೆ ನಿರಾಕರಣೆ : ಸಾರ್ವಜನಿಕವಾಗಿ ವ್ಯಕ್ತಿಯ ತಲೆ ಬೋಳಿಸಿ ದೌರ್ಜನ್ಯ

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರ ತಲೆಯನ್ನು ಸಾರ್ವಜನಿಕ ಸ್ಥಳದಲ್ಲಿ ಬಲವಂತವಾಗಿ ಬೋಳಿಸಿ ಅವಮಾನಿಸುವ ಮೂಲಕ ದೌರ್ಜನ್ಯವೆಸಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ಸೇರಿದಂತೆ ಅನೇಕರು ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಝಾನ್ಸಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಪ್ರಭಾವಿ ಕುಟುಂಬವೊಂದು ತಮ್ಮ ಪ್ರಾಣಿಗಳಿಗೆ ಆಹಾರ, ನೀರು ಕೊಡುವುದು ಸೇರಿದಂತೆ ಅವುಗಳನ್ನು ನೋಡಿಕೊಳ್ಳಲು ಸಂತ್ರಸ್ತ ವ್ಯಕ್ತಿಗೆ ಹೇಳಿತ್ತು, ಅವರು ಅದಕ್ಕೆ ಒಪ್ಪಿರಲಿಲ್ಲ. ಈ ಕಾರಣಕ್ಕೆ ತಲೆ ಬೋಳಿಸಿ ದೌರ್ಜನ್ಯ ನಡೆಸಲಾಗಿದೆ.

ಪತ್ರಕರ್ತ ರಣವಿಜಯ್ ಸಿಂಗ್ ಎಂಬವರು ಮೊದಲು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಆ ಬಳಿಕ ಅದು ವೈರಲ್ ಆಗಿದೆ. ರಣವಿಜಯ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಝಾನ್ಸಿ ಪೊಲೀಸರು ” ಇದು ಸಿಪ್ರಿ ಬಝಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೆಲ ವ್ಯಕ್ತಿಗಳು ಕ್ಷುಲ್ಲಕ ಕಾರಣಕ್ಕೆ ಅಕ್ಟೋಬರ್ 22ರಂದು ಮಧ್ಯಾಹ್ನ 2.30ರ ಸುಮಾರಿಗೆ ನನಗೆ ಥಳಿಸಿ ದೌರ್ಜನ್ಯ ನಡೆಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಕ್ಟೋಬರ್ 23ರಂದು ಬಾಬಾ ಎಂಬವರು ದೂರು ನೀಡಿದ್ದಾರೆ. ದೂರಿನ ಅನ್ವಯ ನಾಲ್ಕು ಮಂದಿಯ ವಿರುದ್ದ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಅವರ ಶೀಘ್ರ ಬಂಧನಕ್ಕೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ಜಾಲತಾಣಗಳ ಮೂಲಕ ದೌರ್ಜನ್ಯದ ವಿಡಿಯೋ ಬೆಳಕಿಗೆ ಬಂದಿದೆ. ಅದರಲ್ಲಿ ದೂರುದಾರನ ತಲೆ ಬೋಳಿಸಿರುವುದು ಕಂಡು ಬಂದಿದೆ. ಅದನ್ನೂ ಪರಿಗಣಿಸಿ ಈಗಾಗಲೇ ದಾಖಲಾದ ಪ್ರಕರಣದಲ್ಲಿ ಸೇರಿಸಲಾಗುವುದು. ಸೂಕ್ತ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ “ಉತ್ತರ ಪ್ರದೇಶದ ಝಾನ್ಸಿಯಿಂದ ವಿಡಿಯೋವೊಂದು ವೈರಲ್ ಆಗುತ್ತಿದೆ. ಅದರಲ್ಲಿ ವ್ಯಕ್ತಿಯೊಬ್ಬರ ತಲೆಯನ್ನು ಬಲವಂತವಾಗಿ ಬೋಳಿಸುತ್ತಿರುವುದು ಕಾಣಬಹುದು. ವಿಡಿಯೋದಲ್ಲಿರುವ ವ್ಯಕ್ತಿ ಮಾಡಿರುವ ತಪ್ಪೆಂದರೆ ಬಲವಂತದ ದುಡಿಮೆಗೆ ನಿರಾಕರಿಸಿರುವುದು. ಇಷ್ಟಕ್ಕೆ ದುರಹಂಕಾರಿಗಳು ಅವರಿಗೆ ಹೊಡೆದು, ಮರಕ್ಕೆ ತಲೆಕೆಳಗಾಗಿ ನೇತುಹಾಕಿ, ಅವರ ಕೂದಲನ್ನು ಕತ್ತರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ಬಡ ಮತ್ತು ಅಸಹಾಯಕ ಕಾರ್ಮಿಕರ ಘನತೆ ಮತ್ತು ಸ್ವಾಭಿಮಾನವನ್ನು ಬಹಿರಂಗವಾಗಿ ತುಳಿಯುವ ಬಿಜೆಪಿಯ ಜಂಗಲ್ ರಾಜ್‌ನ ಹೃದಯವಿದ್ರಾವಕ ಚಿತ್ರಣ ಇದಾಗಿದೆ. ಅಲ್ಲಿ ಪೊಲೀಸರು, ಆಡಳಿತ ಮತ್ತು ಸರ್ಕಾರ ಕೇವಲ ರೌಡಿಗಳ ಮತ್ತು ಅಪರಾಧಿಗಳ ರಕ್ಷಣೆಗಾಗಿ ಕೆಲಸ ಮಾಡುತ್ತದೆ. ಆದರೆ, ಬಡವರ ಬಗ್ಗೆ ಕೇಳುವುದೇ ಇಲ್ಲ. ನಾಚಿಕೆಗೇಡು” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : ಕಡಪ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿ; ಪೋಕ್ಸೋ ಕೇಸ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...