Homeಮುಖಪುಟಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ. 

- Advertisement -
- Advertisement -

ವ್ಯಕ್ತಿಯೊಬ್ಬ ಧ್ವನಿ ಬದಲಾಯಿಸುವ ಆ್ಯಪ್ ಬಳಸಿ, ಶಿಕ್ಷಕಿಯಂತೆ ಬಿಂಬಿಸಿಕೊಂಡು ಏಳು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ.

ಪ್ರಕರಣ ಸಂಬಂಧ ಪೊಲೀಸರು 30 ವರ್ಷದ ಕಾರ್ಮಿಕ ಬ್ರಜೇಶ್ ಪ್ರಜಾಪತಿ ಮತ್ತು ಆತನ ಮೂವರು ಸಹಚರರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆದೇಶದ ಮೇರೆಗೆ ರಚಿಸಲಾದ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಐವರು ಸಂತ್ರಸ್ತೆಯರನ್ನು ಒಳಗೊಂಡ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ನಾಲ್ವರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿಯರಲ್ಲಿ ಒಬ್ಬಳು ಅಪ್ರಾಪ್ತೆ ಎಂದು ಸಿಧಿಯ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ಹೇಳಿದ್ದಾರೆ.

ಸಿಧಿಯ ಮಜೌಲಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್‌ಗಳಾದ 376 (2) (ಎನ್‌), 354,506,342,366, ಮತ್ತು 294ರ ಅಡಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಪ್ರಕರಣದಲ್ಲಿ 2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 3/4 ಅನ್ನು ಅನ್ವಯಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ನಾಲ್ವರು ಬುಡಕಟ್ಟು ವಿದ್ಯಾರ್ಥಿನಿಯರಲ್ಲದೆ, ಇತರ ಮೂವರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌ಐಟಿಯ ಭಾಗವಾಗಿರುವ ಮಜೌಲಿ ಪೊಲೀಸ್ ಠಾಣೆಯ ಉಸ್ತುವಾರಿ ದೀಪಕ್ ಬಾಘೇಲ್ ಹೇಳಿದ್ದಾರೆ.

ಬ್ರಜೇಶ್ ಪ್ರಜಾಪತಿ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದು, ಸಂದೀಪ್ ಪ್ರಜಾಪತಿ, ರಾಹುಲ್ ಪ್ರಜಾಪತಿ, ಮತ್ತು ಲವ್ಕುಶ್ ಪ್ರಜಾಪತಿ ಆತನಿಗೆ ಸಹಾಯ ಮಾಡಿದ್ದಾರೆ ಎಂದು ಎಸ್‌ಐಟಿಯ ನೇತೃತ್ವ ವಹಿಸಿರುವ ಡಿಎಸ್‌ಪಿ ರೋಶ್ನಿ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಅತ್ಯಾಚಾರದ ಬಳಿಕ ಆರೋಪಿಗಳು ವಿದ್ಯಾರ್ಥಿನಿಯರಿಂದ ಮೊಬೈಲ್ ಫೋನ್ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡು ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 16 ಮೊಬೈಲ್ ಫೋನ್‌ಗಳು ಮತ್ತು ಹಲವಾರು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಪ್ರಕರಣದ ವಿವರಣೆ: ಆರೋಪಿಗಳಲ್ಲಿ ಒಬ್ಬನಾದ ಲವ್ಕುಶ್ ಪ್ರಜಾಪತಿ ಎರಡು ವರ್ಷಗಳ ಹಿಂದೆಯಷ್ಟೆ ಪದವಿ ಮುಗಿಸಿದ್ದ. ಆದ್ದರಿಂದ ಆತ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿನಲ್ಲಿದ್ದ. ಅಲ್ಲಿಂದ ಒಬ್ಬಳು ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ಪ್ರಮುಖ ಆರೋಪಿ ಬ್ರಜೇಶ್ ಪ್ರಜಾಪತಿಗೆ ನೀಡಿದ್ದ. ಆತ ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಿಕೊಂಡಿದ್ದ. ಬಳಿಕ ಆ ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಇತರ ವಿದ್ಯಾರ್ಥಿನಿಯರ ನಂಬರ್ ಪಡೆದುಕೊಂಡಿದ್ದ.

ಯೂಟ್ಯೂಬ್ ನೋಡಿ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಗ್ಗೆ ತಿಳಿದುಕೊಂಡಿದ್ದ ಬ್ರಜೇಶ್ ಪ್ರಜಾಪತಿ, ಆ ಆ್ಯಪ್ ಅನ್ನು ತನ್ನ ಮೊಬೈಲ್‌ನಲ್ಲಿ ಡೌನ್ಲೋಡ್‌ ಮಾಡಿಕೊಂಡಿದ್ದ. ಅದರ ಸಹಾಯದಿಂದ ಮಹಿಳೆಯರಂತೆ ಧ್ವನಿ ಬದಲಾಯಿಸಿ ವಿದ್ಯಾರ್ಥಿನಿಯರಿಗೆ ಕರೆ ಮಾಡುತ್ತಿದ್ದ. ತನ್ನನ್ನು ತಾನು ‘ರಂಜನಾ ಮೇಡಂ ಎಂದು ಹೇಳಿಕೊಂಡಿದ್ದ. 18 ವರ್ಷದ ಕಳೆದ ವಿದ್ಯಾರ್ಥಿನಿಯರಿಗೆ ಕರೆ ಮಾಡಿ ಸರ್ಕಾರದಿಂದ ಸ್ಕಾಲರ್ ಶಿಪ್ ಇದೆ ಎಂದು ತನ್ನ ಬಳಿಗೆ ಕರೆಸಿಕೊಳ್ಳುತ್ತಿದ್ದ. ತನ್ನ ಬಳಿಗೆ ಬಂದ ವಿದ್ಯಾರ್ಥಿನಿಯರಿಗೆ ತಾನು ರಂಜನಾ ಮೇಡಂ ಮಗ ಎಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ. ವಿದ್ಯಾರ್ಥಿನಿಯರ ಮುಖತಃ ಭೇಟಿಯ ವೇಳೆ ಆರೋಪಿ ಬಟ್ಟೆ ಅಥವಾ ಹೆಲ್ಮೆಟ್‌ನಿಂದ ಮುಖ ಮುಚ್ಚಿಕೊಳ್ಳುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಗೃಹ ಬಂಧನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...