Homeಮುಖಪುಟಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ. 

- Advertisement -
- Advertisement -

ವ್ಯಕ್ತಿಯೊಬ್ಬ ಧ್ವನಿ ಬದಲಾಯಿಸುವ ಆ್ಯಪ್ ಬಳಸಿ, ಶಿಕ್ಷಕಿಯಂತೆ ಬಿಂಬಿಸಿಕೊಂಡು ಏಳು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ.

ಪ್ರಕರಣ ಸಂಬಂಧ ಪೊಲೀಸರು 30 ವರ್ಷದ ಕಾರ್ಮಿಕ ಬ್ರಜೇಶ್ ಪ್ರಜಾಪತಿ ಮತ್ತು ಆತನ ಮೂವರು ಸಹಚರರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆದೇಶದ ಮೇರೆಗೆ ರಚಿಸಲಾದ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಐವರು ಸಂತ್ರಸ್ತೆಯರನ್ನು ಒಳಗೊಂಡ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ನಾಲ್ವರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿಯರಲ್ಲಿ ಒಬ್ಬಳು ಅಪ್ರಾಪ್ತೆ ಎಂದು ಸಿಧಿಯ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ಹೇಳಿದ್ದಾರೆ.

ಸಿಧಿಯ ಮಜೌಲಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್‌ಗಳಾದ 376 (2) (ಎನ್‌), 354,506,342,366, ಮತ್ತು 294ರ ಅಡಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಪ್ರಕರಣದಲ್ಲಿ 2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 3/4 ಅನ್ನು ಅನ್ವಯಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ನಾಲ್ವರು ಬುಡಕಟ್ಟು ವಿದ್ಯಾರ್ಥಿನಿಯರಲ್ಲದೆ, ಇತರ ಮೂವರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌ಐಟಿಯ ಭಾಗವಾಗಿರುವ ಮಜೌಲಿ ಪೊಲೀಸ್ ಠಾಣೆಯ ಉಸ್ತುವಾರಿ ದೀಪಕ್ ಬಾಘೇಲ್ ಹೇಳಿದ್ದಾರೆ.

ಬ್ರಜೇಶ್ ಪ್ರಜಾಪತಿ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದು, ಸಂದೀಪ್ ಪ್ರಜಾಪತಿ, ರಾಹುಲ್ ಪ್ರಜಾಪತಿ, ಮತ್ತು ಲವ್ಕುಶ್ ಪ್ರಜಾಪತಿ ಆತನಿಗೆ ಸಹಾಯ ಮಾಡಿದ್ದಾರೆ ಎಂದು ಎಸ್‌ಐಟಿಯ ನೇತೃತ್ವ ವಹಿಸಿರುವ ಡಿಎಸ್‌ಪಿ ರೋಶ್ನಿ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಅತ್ಯಾಚಾರದ ಬಳಿಕ ಆರೋಪಿಗಳು ವಿದ್ಯಾರ್ಥಿನಿಯರಿಂದ ಮೊಬೈಲ್ ಫೋನ್ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡು ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 16 ಮೊಬೈಲ್ ಫೋನ್‌ಗಳು ಮತ್ತು ಹಲವಾರು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಪ್ರಕರಣದ ವಿವರಣೆ: ಆರೋಪಿಗಳಲ್ಲಿ ಒಬ್ಬನಾದ ಲವ್ಕುಶ್ ಪ್ರಜಾಪತಿ ಎರಡು ವರ್ಷಗಳ ಹಿಂದೆಯಷ್ಟೆ ಪದವಿ ಮುಗಿಸಿದ್ದ. ಆದ್ದರಿಂದ ಆತ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿನಲ್ಲಿದ್ದ. ಅಲ್ಲಿಂದ ಒಬ್ಬಳು ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ಪ್ರಮುಖ ಆರೋಪಿ ಬ್ರಜೇಶ್ ಪ್ರಜಾಪತಿಗೆ ನೀಡಿದ್ದ. ಆತ ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಿಕೊಂಡಿದ್ದ. ಬಳಿಕ ಆ ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಇತರ ವಿದ್ಯಾರ್ಥಿನಿಯರ ನಂಬರ್ ಪಡೆದುಕೊಂಡಿದ್ದ.

ಯೂಟ್ಯೂಬ್ ನೋಡಿ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಗ್ಗೆ ತಿಳಿದುಕೊಂಡಿದ್ದ ಬ್ರಜೇಶ್ ಪ್ರಜಾಪತಿ, ಆ ಆ್ಯಪ್ ಅನ್ನು ತನ್ನ ಮೊಬೈಲ್‌ನಲ್ಲಿ ಡೌನ್ಲೋಡ್‌ ಮಾಡಿಕೊಂಡಿದ್ದ. ಅದರ ಸಹಾಯದಿಂದ ಮಹಿಳೆಯರಂತೆ ಧ್ವನಿ ಬದಲಾಯಿಸಿ ವಿದ್ಯಾರ್ಥಿನಿಯರಿಗೆ ಕರೆ ಮಾಡುತ್ತಿದ್ದ. ತನ್ನನ್ನು ತಾನು ‘ರಂಜನಾ ಮೇಡಂ ಎಂದು ಹೇಳಿಕೊಂಡಿದ್ದ. 18 ವರ್ಷದ ಕಳೆದ ವಿದ್ಯಾರ್ಥಿನಿಯರಿಗೆ ಕರೆ ಮಾಡಿ ಸರ್ಕಾರದಿಂದ ಸ್ಕಾಲರ್ ಶಿಪ್ ಇದೆ ಎಂದು ತನ್ನ ಬಳಿಗೆ ಕರೆಸಿಕೊಳ್ಳುತ್ತಿದ್ದ. ತನ್ನ ಬಳಿಗೆ ಬಂದ ವಿದ್ಯಾರ್ಥಿನಿಯರಿಗೆ ತಾನು ರಂಜನಾ ಮೇಡಂ ಮಗ ಎಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ. ವಿದ್ಯಾರ್ಥಿನಿಯರ ಮುಖತಃ ಭೇಟಿಯ ವೇಳೆ ಆರೋಪಿ ಬಟ್ಟೆ ಅಥವಾ ಹೆಲ್ಮೆಟ್‌ನಿಂದ ಮುಖ ಮುಚ್ಚಿಕೊಳ್ಳುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಗೃಹ ಬಂಧನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...