Homeಮುಖಪುಟಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು...

ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಉದ್ದವ್ ಬಾಳ ಸಾಹೇಬ್ ಠಾಕ್ರೆ (ಯುಬಿಟಿ) ಪಕ್ಷದ ನಾಯಕ ವಿನೋದ್ ಘೋಸಾಲ್ಕರ್‌ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್‌ ಅವರನ್ನು ಫೇಸ್‌ಬುಕ್‌ ಲೈವ್‌ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮುಂಬೈನ ಉಪನಗರ ದಹಿಸಾರ್‌ನಲ್ಲಿ ನಿನ್ನೆ (ಫೆ.8) ಸಂಜೆ ನಡೆದ ಈ ಘಟನೆ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದೆ. ಅಭಿಷೇಕ್ ಘೋಸಾಲ್ಕರ್‌ಗೆ ಗುಂಡಿಕ್ಕಿದ ಬಳಿಕ ಆರೋಪಿ ಮೌರಿಸ್ ನೊರೊನ್ಹಾ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವುತ್ ಎಕ್ಸ್‌ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸಿಎಂ ಏಕನಾಥ್ ಶಿಂಧೆ ಜೊತೆ ಆರೋಪಿ ಮೌರಿಸ್ ನೊರೊನ್ಹಾ ಇರುವುದು ಕಂಡು ಬಂದಿದೆ.

“ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವರ್ಷ ಭೂಗತ ಪಾತಕಿಗಳ ಪಾಲಿಗೆ ಸ್ವರ್ಗವಾಗಿ ಬದಲಾಗಿದೆ. ಗೃಹ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವುದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಫೋಟೋ ಜೊತೆಗೆ ಸಂಜಯ್ ರಾವುತ್ ಬರೆದುಕೊಂಡಿದ್ದಾರೆ.

ಗುಂಡೇಟಿಗೆ ಬಲಿಯಾದ ಮಾಜಿ ಕಾರ್ಪೋರೇಟರ್ ಅಭಿಷೇಕ್ ಘೋಸಾಲ್ಕರ್‌ ಸಾಮಾಜಿಕ ಕಾರ್ಯಕರ್ತ ಎಂದು ಹೇಳಲಾಗಿರುವ ಆರೋಪಿ ನೊರೊನ್ಹಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲೈವ್‌ನ ಕೊನೆಯಲ್ಲಿ ನೊರೊನ್ಹಾ ಎದ್ದು ಹೋಗಿದ್ದಾನೆ. ಆತನ ಹಿಂದೆಯೇ ಅಭಿಷೇಕ್ ಘೋಸಾಲ್ಕರ್‌ ಎದ್ದು ಹೋಗಲು ಅನಿಯಾದಾಗ ಗುಂಡಿನ ದಾಳಿ ನಡೆದಿದೆ. ಅಭಿಷೇಕ್ ಅವರಿಗೆ ಗುಂಡೇಟು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಆ ಕಡೆಯಿಂದ ಯಾರು ಗುಂಡಿಕ್ಕಿದ್ದಾರೆ ಎಂದು ಗೊತ್ತಾಗಿಲ್ಲ. ಅಭಿಷೇಕ್ ಘೋಸಾಲ್ಕರ್‌ಗೆ ಅವರ ಜೊತೆಯಿದ್ದ ಮೌರಿಸ್ ನೊರೊನ್ಹಾ ಗುಂಡಿಕ್ಕಿದ್ದು, ಬಳಿಕ ಆತನ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಈಶ್ವರಪ್ಪ ‘ಗುಂಡಿಕ್ಕಿ ಕೊಲ್ಲಿ’ ಹೇಳಿಕೆ: ಗೋಡ್ಸೆ ಸಂತತಿಯವರ ಭಯೋತ್ಪಾದಕ ಮನಸ್ಥಿತಿ ಅನಾವರಣ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...