Homeಮುಖಪುಟಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು...

ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಉದ್ದವ್ ಬಾಳ ಸಾಹೇಬ್ ಠಾಕ್ರೆ (ಯುಬಿಟಿ) ಪಕ್ಷದ ನಾಯಕ ವಿನೋದ್ ಘೋಸಾಲ್ಕರ್‌ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್‌ ಅವರನ್ನು ಫೇಸ್‌ಬುಕ್‌ ಲೈವ್‌ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮುಂಬೈನ ಉಪನಗರ ದಹಿಸಾರ್‌ನಲ್ಲಿ ನಿನ್ನೆ (ಫೆ.8) ಸಂಜೆ ನಡೆದ ಈ ಘಟನೆ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದೆ. ಅಭಿಷೇಕ್ ಘೋಸಾಲ್ಕರ್‌ಗೆ ಗುಂಡಿಕ್ಕಿದ ಬಳಿಕ ಆರೋಪಿ ಮೌರಿಸ್ ನೊರೊನ್ಹಾ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವುತ್ ಎಕ್ಸ್‌ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸಿಎಂ ಏಕನಾಥ್ ಶಿಂಧೆ ಜೊತೆ ಆರೋಪಿ ಮೌರಿಸ್ ನೊರೊನ್ಹಾ ಇರುವುದು ಕಂಡು ಬಂದಿದೆ.

“ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವರ್ಷ ಭೂಗತ ಪಾತಕಿಗಳ ಪಾಲಿಗೆ ಸ್ವರ್ಗವಾಗಿ ಬದಲಾಗಿದೆ. ಗೃಹ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವುದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಫೋಟೋ ಜೊತೆಗೆ ಸಂಜಯ್ ರಾವುತ್ ಬರೆದುಕೊಂಡಿದ್ದಾರೆ.

ಗುಂಡೇಟಿಗೆ ಬಲಿಯಾದ ಮಾಜಿ ಕಾರ್ಪೋರೇಟರ್ ಅಭಿಷೇಕ್ ಘೋಸಾಲ್ಕರ್‌ ಸಾಮಾಜಿಕ ಕಾರ್ಯಕರ್ತ ಎಂದು ಹೇಳಲಾಗಿರುವ ಆರೋಪಿ ನೊರೊನ್ಹಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲೈವ್‌ನ ಕೊನೆಯಲ್ಲಿ ನೊರೊನ್ಹಾ ಎದ್ದು ಹೋಗಿದ್ದಾನೆ. ಆತನ ಹಿಂದೆಯೇ ಅಭಿಷೇಕ್ ಘೋಸಾಲ್ಕರ್‌ ಎದ್ದು ಹೋಗಲು ಅನಿಯಾದಾಗ ಗುಂಡಿನ ದಾಳಿ ನಡೆದಿದೆ. ಅಭಿಷೇಕ್ ಅವರಿಗೆ ಗುಂಡೇಟು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಆ ಕಡೆಯಿಂದ ಯಾರು ಗುಂಡಿಕ್ಕಿದ್ದಾರೆ ಎಂದು ಗೊತ್ತಾಗಿಲ್ಲ. ಅಭಿಷೇಕ್ ಘೋಸಾಲ್ಕರ್‌ಗೆ ಅವರ ಜೊತೆಯಿದ್ದ ಮೌರಿಸ್ ನೊರೊನ್ಹಾ ಗುಂಡಿಕ್ಕಿದ್ದು, ಬಳಿಕ ಆತನ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಈಶ್ವರಪ್ಪ ‘ಗುಂಡಿಕ್ಕಿ ಕೊಲ್ಲಿ’ ಹೇಳಿಕೆ: ಗೋಡ್ಸೆ ಸಂತತಿಯವರ ಭಯೋತ್ಪಾದಕ ಮನಸ್ಥಿತಿ ಅನಾವರಣ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...