Homeಮುಖಪುಟಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು...

ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಉದ್ದವ್ ಬಾಳ ಸಾಹೇಬ್ ಠಾಕ್ರೆ (ಯುಬಿಟಿ) ಪಕ್ಷದ ನಾಯಕ ವಿನೋದ್ ಘೋಸಾಲ್ಕರ್‌ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್‌ ಅವರನ್ನು ಫೇಸ್‌ಬುಕ್‌ ಲೈವ್‌ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮುಂಬೈನ ಉಪನಗರ ದಹಿಸಾರ್‌ನಲ್ಲಿ ನಿನ್ನೆ (ಫೆ.8) ಸಂಜೆ ನಡೆದ ಈ ಘಟನೆ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದೆ. ಅಭಿಷೇಕ್ ಘೋಸಾಲ್ಕರ್‌ಗೆ ಗುಂಡಿಕ್ಕಿದ ಬಳಿಕ ಆರೋಪಿ ಮೌರಿಸ್ ನೊರೊನ್ಹಾ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವುತ್ ಎಕ್ಸ್‌ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸಿಎಂ ಏಕನಾಥ್ ಶಿಂಧೆ ಜೊತೆ ಆರೋಪಿ ಮೌರಿಸ್ ನೊರೊನ್ಹಾ ಇರುವುದು ಕಂಡು ಬಂದಿದೆ.

“ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವರ್ಷ ಭೂಗತ ಪಾತಕಿಗಳ ಪಾಲಿಗೆ ಸ್ವರ್ಗವಾಗಿ ಬದಲಾಗಿದೆ. ಗೃಹ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವುದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಫೋಟೋ ಜೊತೆಗೆ ಸಂಜಯ್ ರಾವುತ್ ಬರೆದುಕೊಂಡಿದ್ದಾರೆ.

ಗುಂಡೇಟಿಗೆ ಬಲಿಯಾದ ಮಾಜಿ ಕಾರ್ಪೋರೇಟರ್ ಅಭಿಷೇಕ್ ಘೋಸಾಲ್ಕರ್‌ ಸಾಮಾಜಿಕ ಕಾರ್ಯಕರ್ತ ಎಂದು ಹೇಳಲಾಗಿರುವ ಆರೋಪಿ ನೊರೊನ್ಹಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲೈವ್‌ನ ಕೊನೆಯಲ್ಲಿ ನೊರೊನ್ಹಾ ಎದ್ದು ಹೋಗಿದ್ದಾನೆ. ಆತನ ಹಿಂದೆಯೇ ಅಭಿಷೇಕ್ ಘೋಸಾಲ್ಕರ್‌ ಎದ್ದು ಹೋಗಲು ಅನಿಯಾದಾಗ ಗುಂಡಿನ ದಾಳಿ ನಡೆದಿದೆ. ಅಭಿಷೇಕ್ ಅವರಿಗೆ ಗುಂಡೇಟು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಆ ಕಡೆಯಿಂದ ಯಾರು ಗುಂಡಿಕ್ಕಿದ್ದಾರೆ ಎಂದು ಗೊತ್ತಾಗಿಲ್ಲ. ಅಭಿಷೇಕ್ ಘೋಸಾಲ್ಕರ್‌ಗೆ ಅವರ ಜೊತೆಯಿದ್ದ ಮೌರಿಸ್ ನೊರೊನ್ಹಾ ಗುಂಡಿಕ್ಕಿದ್ದು, ಬಳಿಕ ಆತನ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಈಶ್ವರಪ್ಪ ‘ಗುಂಡಿಕ್ಕಿ ಕೊಲ್ಲಿ’ ಹೇಳಿಕೆ: ಗೋಡ್ಸೆ ಸಂತತಿಯವರ ಭಯೋತ್ಪಾದಕ ಮನಸ್ಥಿತಿ ಅನಾವರಣ ಎಂದ ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...