Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....