Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...