Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...