Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....