Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...