Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...