Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...