Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...