Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...