Homeಕರ್ನಾಟಕಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

- Advertisement -
- Advertisement -

ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ರಾಜ್ಯದ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಉತ್ತರ ಭಾರತದ ಅಂಗಡಿ ಮಾಲೀಕರು ಕನ್ನಡ ನಾಮಫಲಕ ಅಳವಡಿಸಿಕೊಂಡಿಲ್ಲ. ನಾಮಫಲಕಗಳಲ್ಲಿ ಶೇ. 60% ರಷ್ಟು ಕನ್ನಡ ಇರಬೇಕು ಎಂಬ ಆದೇಶವನ್ನು ಬಹುತೇಕರು ಪಾಲನೆ ಮಾಡುತ್ತಿಲ್ಲ. ಅನ್ಯ ರಾಜ್ಯಗಳ ಅಂಗಡಿ ಮಾಲೀಕರು ಕನ್ನಡ ವಿರೋಧಿ ನಡೆ ವಿರೊಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಹೋರಾಟಕ್ಕೆ ಧುಮುಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಬ್ಬನ್‌ ಪಾರ್ಕ್‌ ವರೆಗೆ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕನ್ನಡಪರ ಕಾರ್ಯಕರ್ತರು ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ ಕೈಗೊಂಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ತಮ್ಮ ಸೈನ್ ಬೋರ್ಡ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಒತ್ತಾಯಿಸಿ, ಖಾಸಗಿ ಹೋಟೆಲ್ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದರು.

ಬೆಂಗಳೂರಿನ ಬೀದಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ಪೋಸ್ಟರ್‌ಗಳನ್ನು ಸಹ ಹರಿದು ಹಾಕಿದರು. 2024ರ ಫೆಬ್ರವರಿ 28ರೊಳಗೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ರಾಜಧಾನಿಯ ವಾಣಿಜ್ಯ ಸಂಸ್ಥೆಗಳಿಗೆ ಬಿಬಿಎಂಪಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೂಡಲೇ ಕನ್ನಡ ಭಾಷೆಯಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಕನ್ನಡ ಪರ ಕಾರ್ಯಕರ್ತರು ಅಂಗಡಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಎಲ್ಲ ಸಂಸ್ಥೆಗಳು ಮತ್ತು ಅಂಗಡಿಗಳು ಫೆಬ್ರವರಿ 28 ರ ಮೊದಲು ಕಡ್ಡಾಯ ಕನ್ನಡ ನಾಮಫಲಕ ಆದೇಶವನ್ನು ಪಾಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ’ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಚಿಕ್ಕಪೇಟೆ, ಅವಿನ್ಯೂ ರಸ್ತೆ ಹಾಗೂ ಅಕ್ಕಪಕ್ಕದ ವ್ಯಾಪಾರ ಸ್ಥಳಗಳಲ್ಲಿ ಅಂಗಡಿ ತೆರೆದಿರುವ ಉತ್ತರ ಭಾರತದವರು ಕನ್ನಡ ನಾಮಫಲಕಗಳ ಬದಲಿಗೆ ಇಂಗ್ಲಿಷ್ ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುತಿಸಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಫೆಬ್ರವರಿ 28ರ ಮೊದಲು ಬೆಂಗಳೂರಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ ಫಲಕಗಳನ್ನು ಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 1,400 ಕಿ.ಮೀ. ಮತ್ತು ಎಲ್ಲ ವಾಣಿಜ್ಯ ಸಂಸ್ಥೆಗಳನ್ನು ವಲಯವಾರು ಸಮೀಕ್ಷೆ ಮಾಡಲಾಗುವುದು. ನಾಮಫಲಕಗಳಲ್ಲಿ ಕನ್ನಡ ಬಳಸದವರಿಗೆ ನಾವು ನೋಟಿಸ್ ನೀಡುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...